ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲ ಗ್ರಾಮದ ಕಾರಿಬೈಲು ಎಂಬಲ್ಲಿ ಸುಮಾರು 2.ಲಕ್ಷ.ರೂ ಮೌಲ್ಯದ ಶ್ರೀಗಂಧದ ಮರದ ತಂಡುಗಳನ್ನು ಕ್ಷೀಪ್ರ ಕಾರ್ಯಾಚರಣೆ ಮೂಲಕ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಬೆಳ್ಳಾಲ ಗ್ರಾಮದ ಕಾರಿಬೈಲು ಪರಿಸರದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಅನುಮಾನಾಸ್ಪದ ಪಟ್ಟ ಸ್ಥಳದಲ್ಲಿದ್ದ ಬೆಲೆಬಾಳುವ ಒಂದು ಶ್ರೀಗಂಧದ ಮರವನ್ನು ಆರೋಪಿಗಳು ಕಡಿದು ಸಾಗಾಟ ಮಾಡುವ ಹೊತ್ತಿನಲ್ಲಿ ಖಚಿತ ಮಾಹಿತಿ ಮೇರೆಗೆ ಡಿಸಿಎಫ್ ಉದಯ ಎಂ ನಾಯಕ್ ಅವರ ನಿರ್ದೇಶನದಂತೆ,ಎಸಿಎಫ್ ಕ್ಲಿಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಕಿರಣ್ ಬಾಬು ಟಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಆನಂದ ಬಳೆಗಾರ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಇವೊಂದು ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಶರತ್ ಗಾಣಿಗ,ಗೀತ ಯಾಸಣ್ಣನವರ್,ಗಸ್ತು ಅರಣ್ಯ ಪಾಲಕ ರಾಘವೇಂದ್ರ,ವಿಜಯ ಕೆ,ಅರಣ್ಯ ವೀಕ್ಷಕ ಉದಯ ಮತ್ತು ವಾಹನ ಚಾಲಕ ಅಶೋಕ ಪಾಲ್ಗೊಂಡಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…