ಕುಂದಾಪುರ:ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಅಲೆಯ ರಭಸಕ್ಕೆ ನಾಡದೋಣಿಯೊಂದು ಸಮುದ್ರದಲ್ಲಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಮೃತ ಪಟ್ಟಿದ್ದು,ಇನ್ನೋರ್ವ ಮೀನುಗಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಮೀನುಗಾರಿಕೆಯಲ್ಲಿ ತೊಡಗಿಕೊಳ್ಳುವ ಹಿನ್ನೆಲೆಯಲ್ಲಿ 8 ಜನರಿದ್ದ ಮೀನುಗಾರರ ತಂಡ ನಾಡದೋಣಿ ಮೂಲಕ ಸಮುದ್ರಕ್ಕೆ ತೆರಳಿದ್ದಾರೆ,ಮೀನುಗಾರಿಕೆ ಮುಗುಸಿಕೊಂಡು ಮರಳಿ ದಡಕ್ಕೆ ಬರುತ್ತಿರುವ ಸಂದರ್ಭದಲ್ಲಿ ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಡದೋಣಿ ಮಗುಚಿ ಬಿದ್ದಿದೆ.ದೋಣಿ ದುರಂತದಲ್ಲಿ ನಾಗೇಶ್ ಖಾರ್ವಿ (30) ಮೃತ ಪಟ್ಟಿದ್ದಾರೆ,ಸತೀಶ್ ಖಾರ್ವಿ (34) ಎಂಬುವವರು ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ.6 ಜನ ಮೀನುಗಾರರು ಈಜಿ ಕೊಂಡು ದಡ ಸೇರಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ಭಾಗದಲ್ಲಿ ಸೂತಕದ ಛಾಯೆ ಮಡುಗಟ್ಟಿದೆ.ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ,ಸರ್ಕಲ್ ಸಂತೋಷ್ ಕಾಯ್ಕಿಣಿ,ಅಗ್ನಿಶಾಮಕ ದಳ ಸಿಬ್ಬಂದಿ,ಮೀನುಗಾರಿಕಾ ಸಹಾಯಕ ನಿರ್ದೇಶಕರು,ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಘಟನಾ ಸ್ಥಳದಲ್ಲಿ ಹಾಜರಿದ್ದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…