ಕುಂದಾಪುರ

ಉಪ್ಪುಂದ ಕರ್ಕಿಕಳಿಯಲ್ಲಿ ದೋಣಿ ದುರಂತ;ಓರ್ವ ಮೀನುಗಾರ ಸಾವು,ಇನ್ನೊಬ್ಬ ನಾಪತ್ತೆ

Share

ಕುಂದಾಪುರ:ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಅಲೆಯ ರಭಸಕ್ಕೆ ನಾಡದೋಣಿಯೊಂದು ಸಮುದ್ರದಲ್ಲಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಮೃತ ಪಟ್ಟಿದ್ದು,ಇನ್ನೋರ್ವ ಮೀನುಗಾರ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಮೀನುಗಾರಿಕೆಯಲ್ಲಿ ತೊಡಗಿಕೊಳ್ಳುವ ಹಿನ್ನೆಲೆಯಲ್ಲಿ 8 ಜನರಿದ್ದ ಮೀನುಗಾರರ ತಂಡ ನಾಡದೋಣಿ ಮೂಲಕ ಸಮುದ್ರಕ್ಕೆ ತೆರಳಿದ್ದಾರೆ,ಮೀನುಗಾರಿಕೆ ಮುಗುಸಿಕೊಂಡು ಮರಳಿ ದಡಕ್ಕೆ ಬರುತ್ತಿರುವ ಸಂದರ್ಭದಲ್ಲಿ ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಡದೋಣಿ ಮಗುಚಿ ಬಿದ್ದಿದೆ.ದೋಣಿ ದುರಂತದಲ್ಲಿ ನಾಗೇಶ್ ಖಾರ್ವಿ (30) ಮೃತ ಪಟ್ಟಿದ್ದಾರೆ,ಸತೀಶ್ ಖಾರ್ವಿ (34) ಎಂಬುವವರು ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ.6 ಜನ ಮೀನುಗಾರರು ಈಜಿ ಕೊಂಡು ದಡ ಸೇರಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಉಪ್ಪುಂದ ಭಾಗದಲ್ಲಿ ಸೂತಕದ ಛಾಯೆ ಮಡುಗಟ್ಟಿದೆ.ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ,ಸರ್ಕಲ್ ಸಂತೋಷ್ ಕಾಯ್ಕಿಣಿ,ಅಗ್ನಿಶಾಮಕ ದಳ ಸಿಬ್ಬಂದಿ,ಮೀನುಗಾರಿಕಾ ಸಹಾಯಕ ನಿರ್ದೇಶಕರು,ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಘಟನಾ ಸ್ಥಳದಲ್ಲಿ ಹಾಜರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

3 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago