ಕುಂದಾಪುರ:ಸಂಘಟನೆಗಳು ಪ್ರಾಮಾಣಿಕ,ಸತ್ಯ,ನಿಷ್ಠೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಸಪ್ನಾ ಸುರೇಶ ಹೇಳಿದರು.ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಅರೆಹೊಳೆ ಮಹಾಲಸಾ ಸಭಾಭವನದಲ್ಲಿ ನಡೆದ ಕ್ಲಬ್ಬಿನ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಅವರು ಮಾತನಾಡಿದರು.
ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು.ಲಯನ್ಸ್ ಜಿಲ್ಲಾ ಪೂರ್ವ ಗವರ್ನರ್ ವಿಶ್ವನಾಥ ಶೆಟ್ಟಿ,ವಲಯಾಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು,ಪ್ರಾಂತೀಯ ಅಧ್ಯಕ್ಷ ಏಕನಾಥ ಬೋಳಾರ್,ಕಾರ್ಯದರ್ಶಿ ಭೋಜರಾಜ ಶೆಟ್ಟಿ,ಗ್ಲೋಬಲ್ ಮೆಂಬರ್ ಜಿಲ್ಲಾ ಸಂಪರ್ಕಾಧಿಕಾರಿ ಅರುಣಕುಮಾರ್ ಹೆಗ್ಡೆ,ವಿಸ್ತರಣಾಧಿಕಾರಿ ವಿಶ್ವನಾಥ ಶೆಟ್ಟಿ ಗಾಯಾಡಿ,ದಿನೇಶ ಆಚಾರ್,ಸಮರ್ ಶೆಟ್ಟಿ,ನಾವುಂದ ಕ್ಲಬ್ಬಿನ ಖಜಾಂಚಿ ರಮೇಶ ಮೊಗವೀರ ಉಪಸ್ಥಿತರಿದ್ದರು.ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಗೆ ನಗದು ಪುರಸ್ಕಾರ ನೀಡಲಾಯಿತು.ಸ್ಥಳೀಯ ಎರಡು ಸರಕಾರಿ ಶಾಲೆಗಳಗೆ ಶೈಕ್ಷಣಿಕ ಧನಸಹಾಯ ನೀಡಲಾಯಿತು.ಚಲನಚಿತ್ರ ನಿರ್ದೇಶಕ ನಾಗರಾಜ ಅರೆಹೊಳೆ ಹಾಗೂ ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಸಪ್ನಾ ಸುರೇಶ ಅವರನ್ನು ಸನ್ಮಾನಿಸಲಾಯಿತು.ಮೂವರು ಹೊಸ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಯಾದರು.ಶಶಿಧರ ಶೆಟ್ಟಿ ನಿರೂಪಿಸಿದರು.ನಾವುಂದ ಕ್ಲಬ್ಬಿನ ಕಾರ್ಯದರ್ಶಿ ಅಶೋಕ ವಿ.ಆಚಾರ್ ವಂದಿಸಿದರು.
(ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಉಡುಪಿ ಜಿಲ್ಲಾ ವತಿಯಿಂದ ಉಡುಪಿಯಲ್ಲಿ ನಡೆದ ತೇಜಸ್ ಮಹಾಬಲ ಡಿಸ್ಟ್ರಿಕ್ಟ್ ಅವಾರ್ಡ್ ಕಾರ್ಯಕ್ರಮದಲ್ಲಿ ಸಮಾಜ ಸೇವಾ ಕೆಲಸದ ಮೂಲಕ ಗುರುತಿಸಿಕೊಂಡಿದ್ದ ಜೋನ್ ಚೇರ್ ಪರ್ಸನ್ ಲಯನ್ ನರಸಿಂಹ ದೇವಾಡಿಗ ಅವರಿಗೆ ತೇಜಸ್ ಡೈಮಂಡ್ ಸ್ಟಾರ್ ಅವಾರ್ಡ್ ನೀಡಿ ಗೌರವಿಸಲಾಯಿತು)
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…