ಕುಂದಾಪುರ:ಸಂಘಟನೆಗಳು ಪ್ರಾಮಾಣಿಕ,ಸತ್ಯ,ನಿಷ್ಠೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಸಪ್ನಾ ಸುರೇಶ ಹೇಳಿದರು.ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಅರೆಹೊಳೆ ಮಹಾಲಸಾ ಸಭಾಭವನದಲ್ಲಿ ನಡೆದ ಕ್ಲಬ್ಬಿನ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಪದಪ್ರದಾನಿಸಿ ಅವರು ಮಾತನಾಡಿದರು.
ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು.ಲಯನ್ಸ್ ಜಿಲ್ಲಾ ಪೂರ್ವ ಗವರ್ನರ್ ವಿಶ್ವನಾಥ ಶೆಟ್ಟಿ,ವಲಯಾಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು,ಪ್ರಾಂತೀಯ ಅಧ್ಯಕ್ಷ ಏಕನಾಥ ಬೋಳಾರ್,ಕಾರ್ಯದರ್ಶಿ ಭೋಜರಾಜ ಶೆಟ್ಟಿ,ಗ್ಲೋಬಲ್ ಮೆಂಬರ್ ಜಿಲ್ಲಾ ಸಂಪರ್ಕಾಧಿಕಾರಿ ಅರುಣಕುಮಾರ್ ಹೆಗ್ಡೆ,ವಿಸ್ತರಣಾಧಿಕಾರಿ ವಿಶ್ವನಾಥ ಶೆಟ್ಟಿ ಗಾಯಾಡಿ,ದಿನೇಶ ಆಚಾರ್,ಸಮರ್ ಶೆಟ್ಟಿ,ನಾವುಂದ ಕ್ಲಬ್ಬಿನ ಖಜಾಂಚಿ ರಮೇಶ ಮೊಗವೀರ ಉಪಸ್ಥಿತರಿದ್ದರು.ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಗೆ ನಗದು ಪುರಸ್ಕಾರ ನೀಡಲಾಯಿತು.ಸ್ಥಳೀಯ ಎರಡು ಸರಕಾರಿ ಶಾಲೆಗಳಗೆ ಶೈಕ್ಷಣಿಕ ಧನಸಹಾಯ ನೀಡಲಾಯಿತು.ಚಲನಚಿತ್ರ ನಿರ್ದೇಶಕ ನಾಗರಾಜ ಅರೆಹೊಳೆ ಹಾಗೂ ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಸಪ್ನಾ ಸುರೇಶ ಅವರನ್ನು ಸನ್ಮಾನಿಸಲಾಯಿತು.ಮೂವರು ಹೊಸ ಸದಸ್ಯರು ಕ್ಲಬ್ಬಿಗೆ ಸೇರ್ಪಡೆಯಾದರು.ಶಶಿಧರ ಶೆಟ್ಟಿ ನಿರೂಪಿಸಿದರು.ನಾವುಂದ ಕ್ಲಬ್ಬಿನ ಕಾರ್ಯದರ್ಶಿ ಅಶೋಕ ವಿ.ಆಚಾರ್ ವಂದಿಸಿದರು.
(ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಉಡುಪಿ ಜಿಲ್ಲಾ ವತಿಯಿಂದ ಉಡುಪಿಯಲ್ಲಿ ನಡೆದ ತೇಜಸ್ ಮಹಾಬಲ ಡಿಸ್ಟ್ರಿಕ್ಟ್ ಅವಾರ್ಡ್ ಕಾರ್ಯಕ್ರಮದಲ್ಲಿ ಸಮಾಜ ಸೇವಾ ಕೆಲಸದ ಮೂಲಕ ಗುರುತಿಸಿಕೊಂಡಿದ್ದ ಜೋನ್ ಚೇರ್ ಪರ್ಸನ್ ಲಯನ್ ನರಸಿಂಹ ದೇವಾಡಿಗ ಅವರಿಗೆ ತೇಜಸ್ ಡೈಮಂಡ್ ಸ್ಟಾರ್ ಅವಾರ್ಡ್ ನೀಡಿ ಗೌರವಿಸಲಾಯಿತು)
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…