ಬೈಂದೂರು:ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸೋಮವಾರ ಸಂಭವಿಸಿದ ದೋಣಿ ದುರಂತ ಘಟನಾ ಸ್ಥಳಕ್ಕೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಂಗಳವಾರ ಭೇಟಿ ನೀಡಿ,ಮೀನುಗಾರರ ಜತೆ ಮಾತುಕತೆ ನಡೆಸಿದರು.
ಉಪ್ಪುಂದದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಉಪ್ಪುಂದ ಕರ್ಕಿಕಳಿ ದೊಡ್ಡಕೊಂಬಿನ ಮನೆ ನಾಗೇಶ್ (29) ಮೃತ ಪಟ್ಟಿದ್ದಾರೆ,ಕರ್ಕಿಕಳಿ ಗಂಜೇರನ ಮನೆ ಸತೀಶ (30) ಎನ್ನುವ ಮೀನುಗಾರ ಯುವಕ ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ.ನಾಪತ್ತೆಯಾಗಿದ್ದ ಮೀನುಗಾರನಿಗಾಗಿ ಹುಡುಕಾಟ ಮುಂದುವರೆದಿದೆ.ಸಚಿನ್ ಎನ್ನುವವರ ಮಾಲೀಕತ್ವದ ಮರ್ಲುಚಿಕ್ಕು ಎನ್ನುವ ಹೆಸರಿನ ದೋಣಿ ಮುಳುಗಿದ್ದು ಸಂಪೂರ್ಣ ಹಾನಿ ಆಗಿದೆ.ಉಪ್ಪುಂದ,ಅಳ್ವೆಕೋಡಿ,ಕೋಡೇರಿ ಭಾಗದಲ್ಲಿ ಇಂತಹ ಘಟನೆಗಳು ಪದೆ ಪದೆ ಮರುಕಳಿಸುತ್ತಾ ಇದ್ದರೂ ಬ್ರೇಕ್ ವಾಟರ್,ಬಂದರು ಅಭಿವೃದ್ಧಿ ಪಡಿಸುವಲ್ಲಿ ಸರಕಾರಗಳು ಆಸಕ್ತಿ ತೋರಿಸುತ್ತಿಲ್ಲ ಎಂದು ಮೀನುಗಾರರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.ಜುಲೈ ತಿಂಗಳಿನಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳಲ್ಲಿ ಸಂಭವಿಸಿದ ಜಲ ದುರಂತದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ.
(ಉಪ್ಪುಂದದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಉಪ್ಪುಂದ ಕರ್ಕಿಕಳಿ ದೊಡ್ಡಕೊಂಬಿನ ಮನೆ ನಾಗೇಶ್ (29) ಮೃತ ಪಟ್ಟಿದ್ದಾರೆ,ಕರ್ಕಿಕಳಿ ಗಂಜೇರನ ಮನೆ ಸತೀಶ (30) ಎನ್ನುವ ಮೀನುಗಾರ ಯುವಕ ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ)
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…