ಕುಂದಾಪುರ

ಉಪ್ಪುಂದ ದೋಣಿ ದುರಂತ:ಶಾಸಕ ಗಂಟಿಹೊಳೆ ಭೇಟಿ

Share

ಬೈಂದೂರು:ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸೋಮವಾರ ಸಂಭವಿಸಿದ ದೋಣಿ ದುರಂತ ಘಟನಾ ಸ್ಥಳಕ್ಕೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮಂಗಳವಾರ ಭೇಟಿ ನೀಡಿ,ಮೀನುಗಾರರ ಜತೆ ಮಾತುಕತೆ ನಡೆಸಿದರು.
ಉಪ್ಪುಂದದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಉಪ್ಪುಂದ ಕರ್ಕಿಕಳಿ ದೊಡ್ಡಕೊಂಬಿನ ಮನೆ ನಾಗೇಶ್ (29) ಮೃತ ಪಟ್ಟಿದ್ದಾರೆ,ಕರ್ಕಿಕಳಿ ಗಂಜೇರನ ಮನೆ ಸತೀಶ (30) ಎನ್ನುವ ಮೀನುಗಾರ ಯುವಕ ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ.ನಾಪತ್ತೆಯಾಗಿದ್ದ ಮೀನುಗಾರನಿಗಾಗಿ ಹುಡುಕಾಟ ಮುಂದುವರೆದಿದೆ.ಸಚಿನ್ ಎನ್ನುವವರ ಮಾಲೀಕತ್ವದ ಮರ್ಲುಚಿಕ್ಕು ಎನ್ನುವ ಹೆಸರಿನ ದೋಣಿ ಮುಳುಗಿದ್ದು ಸಂಪೂರ್ಣ ಹಾನಿ ಆಗಿದೆ.ಉಪ್ಪುಂದ,ಅಳ್ವೆಕೋಡಿ,ಕೋಡೇರಿ ಭಾಗದಲ್ಲಿ ಇಂತಹ ಘಟನೆಗಳು ಪದೆ ಪದೆ ಮರುಕಳಿಸುತ್ತಾ ಇದ್ದರೂ ಬ್ರೇಕ್ ವಾಟರ್,ಬಂದರು ಅಭಿವೃದ್ಧಿ ಪಡಿಸುವಲ್ಲಿ ಸರಕಾರಗಳು ಆಸಕ್ತಿ ತೋರಿಸುತ್ತಿಲ್ಲ ಎಂದು ಮೀನುಗಾರರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.ಜುಲೈ ತಿಂಗಳಿನಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳಲ್ಲಿ ಸಂಭವಿಸಿದ ಜಲ ದುರಂತದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ.

(ಉಪ್ಪುಂದದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಉಪ್ಪುಂದ ಕರ್ಕಿಕಳಿ ದೊಡ್ಡಕೊಂಬಿನ ಮನೆ ನಾಗೇಶ್ (29) ಮೃತ ಪಟ್ಟಿದ್ದಾರೆ,ಕರ್ಕಿಕಳಿ ಗಂಜೇರನ ಮನೆ ಸತೀಶ (30) ಎನ್ನುವ ಮೀನುಗಾರ ಯುವಕ ಸಮುದ್ರದಲ್ಲಿ ನಾಪತ್ತೆ ಆಗಿದ್ದಾರೆ)

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

3 weeks ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 weeks ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

1 month ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago