ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ.
ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ ದೋಣಿಯಲ್ಲಿದ್ದ 7 ಜನರ ಮೀನುಗಾರರ ಪೈಕಿ 5 ಜನ ಮೀನುಗಾರರು ಈಜಿಕೊಂಡು ದಡ ಸೇರಿದ್ದರು.ನಾಗೇಶ್ (29) ಎಂಬುವವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕೊಂಡು ಹೋಗಿದ್ದರು,ಪ್ರಯತ್ನ ಫಲಕಾರಿ ಆಗದೆ ಸಾವನ್ನಪ್ಪಿದ್ದರು.ಸತೀಶ್ ಅವರು ಸಮುದ್ರದಲ್ಲಿ ನಾಪತ್ತೆ ಆಗಿದ್ದರಿಂದ ಅವರಿಗಾಗಿ ಎರಡು ದಿನಗಳಿಂದ ಸತತವಾಗಿ ಹುಡುಕಾಟವನ್ನು ಮಾಡಲಾಗಿತ್ತು.ಮಂಗಳವಾರ ರಾತ್ರಿ ಕೊಡೇರಿ ಸಿವಾಕ್ ಬಳಿ ಶವವಾಗಿ ಪತ್ತೆ ಆಗಿದ್ದಾರೆ.
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…