ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ.
ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ ದೋಣಿಯಲ್ಲಿದ್ದ 7 ಜನರ ಮೀನುಗಾರರ ಪೈಕಿ 5 ಜನ ಮೀನುಗಾರರು ಈಜಿಕೊಂಡು ದಡ ಸೇರಿದ್ದರು.ನಾಗೇಶ್ (29) ಎಂಬುವವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕೊಂಡು ಹೋಗಿದ್ದರು,ಪ್ರಯತ್ನ ಫಲಕಾರಿ ಆಗದೆ ಸಾವನ್ನಪ್ಪಿದ್ದರು.ಸತೀಶ್ ಅವರು ಸಮುದ್ರದಲ್ಲಿ ನಾಪತ್ತೆ ಆಗಿದ್ದರಿಂದ ಅವರಿಗಾಗಿ ಎರಡು ದಿನಗಳಿಂದ ಸತತವಾಗಿ ಹುಡುಕಾಟವನ್ನು ಮಾಡಲಾಗಿತ್ತು.ಮಂಗಳವಾರ ರಾತ್ರಿ ಕೊಡೇರಿ ಸಿವಾಕ್ ಬಳಿ ಶವವಾಗಿ ಪತ್ತೆ ಆಗಿದ್ದಾರೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…