ಕುಂದಾಪುರ

ಸಮುದ್ರದಲ್ಲಿ ನಾಪತ್ತೆ ಆಗಿದ್ದ,ಸತೀಶ್ ಖಾರ್ವಿ ಶವ ಪತ್ತೆ

Share

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ.
ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ ದೋಣಿಯಲ್ಲಿದ್ದ 7 ಜನರ ಮೀನುಗಾರರ ಪೈಕಿ 5 ಜನ ಮೀನುಗಾರರು ಈಜಿಕೊಂಡು ದಡ ಸೇರಿದ್ದರು.ನಾಗೇಶ್ (29) ಎಂಬುವವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕೊಂಡು ಹೋಗಿದ್ದರು,ಪ್ರಯತ್ನ ಫಲಕಾರಿ ಆಗದೆ ಸಾವನ್ನಪ್ಪಿದ್ದರು.ಸತೀಶ್ ಅವರು ಸಮುದ್ರದಲ್ಲಿ ನಾಪತ್ತೆ ಆಗಿದ್ದರಿಂದ ಅವರಿಗಾಗಿ ಎರಡು ದಿನಗಳಿಂದ ಸತತವಾಗಿ ಹುಡುಕಾಟವನ್ನು ಮಾಡಲಾಗಿತ್ತು.ಮಂಗಳವಾರ ರಾತ್ರಿ ಕೊಡೇರಿ ಸಿವಾಕ್ ಬಳಿ ಶವವಾಗಿ ಪತ್ತೆ ಆಗಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

3 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago