ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ಹಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಡಿಲು ಭೂಮಿಗೆ ಮರುಜೀವ ನೀಡುವ ಕಾರ್ಯಕ್ರಮದ ಅಂಗವಾಗಿ ನಿರ್ಜೀವ ಸ್ಥಿತಿಯಲ್ಲಿದ್ದ ಭೂಮಿಯಲ್ಲಿ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಂದ ಗದ್ದೆ ನಾಟಿ ಕಾರ್ಯ ನಡೆಯಿತು.
ಸಂಜೀವಿನಿ ಸಂಘಗಳ ತಾಲೂಕು ಒಕ್ಕೂಟ ಅಧ್ಯಕ್ಷ ವಿಜಯ ಗಾಣಿಗ ಮಾತನಾಡಿ,ಹಡಿಲು ಭೂಮಿಗಳಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕೆಲಸ ಕಾರ್ಯಗಳು ಶ್ಲಾಘನೀಯವಾದದು ಕೃಷಿ ಕ್ಷೇತ್ರದ ಬಗ್ಗೆ ಮಹಿಳೆಯರಿಗೆ ಇನ್ನಷ್ಟು ಕಾಳಜಿ ಮೂಡುವಂತೆ ಮಾಡಿದೆ ಎಂದರು.ಹಂಗಳೂರು ಗ್ರಾಮ ಪಂಚಾಯತ್ ಅದ್ಯಕ್ಷ ಆನಂದ ಚಾಲನೆಯನ್ನು ನೀಡಿ ಶುಭಹಾರೈಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಮತ್ತು ಸಿಬ್ಬಂದಿಗಳು,ಎನ್ಆರ್ಎಲ್ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯತೀಶ್,ಕೃಷಿ ವ್ಯವಸ್ಥಾಪಕಿ ಸಂತೃಪ್ತಿ,ಸ್ಪಂದನ ಒಕ್ಕೂಟ ಅಧ್ಯಕ್ಷೆ ಜಯಂತಿ,ಕಾರ್ಯದರ್ಶಿ ಸವಿತ,ಸುಜಾಜ,ಜ್ಯೋತಿ,ಪುಷ್ಪ,ಜಯಲಕ್ಷ್ಮೀ,ಅನಿತಾ,ಸಂಜೀವಿನಿ ಸಂಘದ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.ಎಂಬಿಕೆ ಶೋಭಾ ನಿರೂಪಿಸಿ,ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…