ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಈಗಾಗಲೇ 85 ಕೋಟಿ.ರೂ ಮಂಜೂರಾಗಿದ್ದು ಬಂದರಿನ ಕಾಮಗಾರಿ ಕೆಲಸ ಆದಷ್ಟು ಬೇಗ ಆರಂಭಿಸಲು ಸಿಆರ್ ಝಡ್ ಕ್ಲಿಯರೆನ್ಸ್ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೆಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ದೆಹಲಿಯಲ್ಲಿ ಭೇಟಿಮಾಡಿ ಮನವಿಯನ್ನು ಮಾಡಿದ್ದಾರೆ.
ಇತ್ತೀಚಿಗೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ವಿಷಯವನ್ನು ಕೇಂದ್ರ ಸಚಿವರ ಗಮನಕ್ಕೆ ತಂದ ಸಂಸದರು ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಹಾಗೂ ಮೀನುಗಾರರ ಸುರಕ್ಷತೆ ದೃಷ್ಟಿಯಿಂದ ಉಪ್ಪುಂದದಲ್ಲಿ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿಯನ್ನು ಸಲ್ಲಿಸಿದರು.ಬೈಂದೂರಿನಲ್ಲಿ 228.78 ಕೋಟಿ.ರೂ ವೆಚ್ಚದಲ್ಲಿ ಮಲ್ಟಿಪರ್ಪಸ್ ಹಾರ್ಬರ್ ಸ್ಥಾಪನೆಗೆ ಖಾಸಗಿ ಸಹಭಾಗಿತ್ವದಲ್ಲಿ ಟೆಂಡರ್ ಕರೆಯಲಾಗಿದ್ದು,ಯಾವುದೇ ಕಂಪನಿಗಳು ಸದರಿ ಟೆಂಡರ್ ಪ್ರಕ್ರಿಯೆಲ್ಲಿ ಭಾಗವಹಿಸಿರಲಿಲ್ಲ.ಯೋಜನೆಗಳಿಗೆ ಬ್ರೇಕ್ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ ಅಗತ್ಯವಿರುವುದರಿಂದ ಒಟ್ಟು ಯೋಜನಾ ವೆಚ್ಚಕ್ಕೆ ಪಿಪಿಪಿ ಕಾರ್ಯಸಾಧ್ಯವಾವುದಿಲ್ಲ ಎಂದು ಕೇಂದ್ರ ಸಚಿವರಿಗೆ ವಿವರಣೆ ನೀಡಿದ ಸಂದರು ಸದರಿ ಯೋಜನೆಗಳಿಗೆ 228.78 ಕೋಟಿ ಅವಶ್ಯಕತೆ ಇದ್ದು ಸರಕಾರ ಖುದ್ದಾಗಿ ಕಾಮಗಾರಿ ಕೆಲಸವನ್ನು ಕೈಗೆತ್ತಿಕೊಳ್ಳಬೇಕೆಂದು ವಿನಂಸಿದರು.ಈ ಬಗ್ಗೆ ಸಕಾರಾತ್ಮಕವಾಗಿ ಕೇಂದ್ರ ಸಚಿವರು ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…