ಕುಂದಾಪುರ

ಮರವಂತೆ ಸಿಆರ್ ಝಡ್ ಕ್ಲಿಯರೆನ್ಸ್ ಗೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವರಿಗೆ ಮನವಿ

Share

Advertisement
Advertisement
Advertisement

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸಕ್ಕೆ ಈಗಾಗಲೇ 85 ಕೋಟಿ.ರೂ ಮಂಜೂರಾಗಿದ್ದು ಬಂದರಿನ ಕಾಮಗಾರಿ ಕೆಲಸ ಆದಷ್ಟು ಬೇಗ ಆರಂಭಿಸಲು ಸಿಆರ್ ಝಡ್ ಕ್ಲಿಯರೆನ್ಸ್ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೆಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ದೆಹಲಿಯಲ್ಲಿ ಭೇಟಿಮಾಡಿ ಮನವಿಯನ್ನು ಮಾಡಿದ್ದಾರೆ.

Advertisement

ಇತ್ತೀಚಿಗೆ ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ವಿಷಯವನ್ನು ಕೇಂದ್ರ ಸಚಿವರ ಗಮನಕ್ಕೆ ತಂದ ಸಂಸದರು ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಹಾಗೂ ಮೀನುಗಾರರ ಸುರಕ್ಷತೆ ದೃಷ್ಟಿಯಿಂದ ಉಪ್ಪುಂದದಲ್ಲಿ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿಯನ್ನು ಸಲ್ಲಿಸಿದರು.ಬೈಂದೂರಿನಲ್ಲಿ 228.78 ಕೋಟಿ.ರೂ ವೆಚ್ಚದಲ್ಲಿ ಮಲ್ಟಿಪರ್ಪಸ್ ಹಾರ್ಬರ್ ಸ್ಥಾಪನೆಗೆ ಖಾಸಗಿ ಸಹಭಾಗಿತ್ವದಲ್ಲಿ ಟೆಂಡರ್ ಕರೆಯಲಾಗಿದ್ದು,ಯಾವುದೇ ಕಂಪನಿಗಳು ಸದರಿ ಟೆಂಡರ್ ಪ್ರಕ್ರಿಯೆಲ್ಲಿ ಭಾಗವಹಿಸಿರಲಿಲ್ಲ.ಯೋಜನೆಗಳಿಗೆ ಬ್ರೇಕ್‍ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ ಅಗತ್ಯವಿರುವುದರಿಂದ ಒಟ್ಟು ಯೋಜನಾ ವೆಚ್ಚಕ್ಕೆ ಪಿಪಿಪಿ ಕಾರ್ಯಸಾಧ್ಯವಾವುದಿಲ್ಲ ಎಂದು ಕೇಂದ್ರ ಸಚಿವರಿಗೆ ವಿವರಣೆ ನೀಡಿದ ಸಂದರು ಸದರಿ ಯೋಜನೆಗಳಿಗೆ 228.78 ಕೋಟಿ ಅವಶ್ಯಕತೆ ಇದ್ದು ಸರಕಾರ ಖುದ್ದಾಗಿ ಕಾಮಗಾರಿ ಕೆಲಸವನ್ನು ಕೈಗೆತ್ತಿಕೊಳ್ಳಬೇಕೆಂದು ವಿನಂಸಿದರು.ಈ ಬಗ್ಗೆ ಸಕಾರಾತ್ಮಕವಾಗಿ ಕೇಂದ್ರ ಸಚಿವರು ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago