ಕೊಡೇರಿಯಲ್ಲಿ ದೋಣಿ ದುರಂತ,9 ಮೀನುಗಾರರು ಪಾರು
ಬೈಂದೂರು:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿ ಬಂದರಿನ ಸುಮಾರು ಐದು ನಾಟಿಕಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ನಾಡದೋಣಿಯೊಂದು ಸಮುದ್ರ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು,ದೋಣಿಯಲ್ಲಿದ್ದ 9 ಜನ ಮೀನುಗಾರರು ಪಾರಾಗಿದ್ದಾರೆ.ಬಲೆ,ದೋಣಿಯಲ್ಲಿನ ಇಂಜಿನ್ಗೆ ಹಾನಿಯಾಗಿದೆ.ಅಂದಾಜು 2.ಲಕ್ಷ.ರೂ ನಷ್ಟ ಉಂಟಾಗಿದ್ದ ಘಟನೆ ಶುಕ್ರವಾರ ನಡೆದಿದೆ.
ಉಪ್ಪುಂದ ಗ್ರಾಮದ ಪಾಳ್ಯದರ ತೋಪ್ಲು ಪುರ್ಶುಯ್ಯನ ಪುಂಡಲೀಕ ಎನ್ನುವವರ ಮಾಲಿಕತ್ವದ ಶ್ರೀದುರ್ಗಾಪರಮೇಶ್ವರಿ ಎನ್ನುವ ದೋಣಿಯಲ್ಲಿ ಶುಕ್ರವಾರ 9 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಅಲೆಯ ಹೊಡೆತಕ್ಕೆ ಸಿಲುಕಿದ ದೋಣಿ ಪಲ್ಟಿ ಹೊಡೆದು ಮುಳುಗಿದೆ.ತಕ್ಷಣದಲ್ಲಿ ಮಾಹಿತಿ ಸಿಕ್ಕಿದ್ದರಿಂದ ಘಟನೆ ಸ್ಥಳಕ್ಕೆ ದೋಣಿಗಳ ಮೂಲಕ ದೌಡಾಯಿಸಿದ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.ಕೂದಲೆಳೆ ಅಂತರದಲ್ಲಿ ಬಾರಿ ದೊಡ್ಡ ಅನಾಹುತವೊಂದು ತಪ್ಪಿದ್ದು ಮೀನುಗಾರರು ನಿಟ್ಟುಸಿರು ಬಿಟ್ಟಿದ್ದಾರೆ.ಮೀನುಗಾರಿಕೆ ತೆರಳುವ ಸಂದರ್ಭದಲ್ಲಿ ಲೈಫ್ ಜಾಕೇಟ್ ಬಳಕೆ ಮಾಡುವಂತೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮನವಿಯನ್ನು ಮಾಡಿಕೊಂಡಿದ್ದಾರೆ.ಒಂದು ವಾರದೊಳಗೆ ಸಂಭವಿಸಿದ ಇದು ಎರಡನೆ ದೋಣಿ ದುರಂತವಾಗಿದೆ.
![](https://kundapurtimes.com/wp-content/uploads/2023/08/mn.jpeg)