ಬೈಂದೂರು:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿ ಬಂದರಿನ ಸುಮಾರು ಐದು ನಾಟಿಕಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ನಾಡದೋಣಿಯೊಂದು ಸಮುದ್ರ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು,ದೋಣಿಯಲ್ಲಿದ್ದ 9 ಜನ ಮೀನುಗಾರರು ಪಾರಾಗಿದ್ದಾರೆ.ಬಲೆ,ದೋಣಿಯಲ್ಲಿನ ಇಂಜಿನ್ಗೆ ಹಾನಿಯಾಗಿದೆ.ಅಂದಾಜು 2.ಲಕ್ಷ.ರೂ ನಷ್ಟ ಉಂಟಾಗಿದ್ದ ಘಟನೆ ಶುಕ್ರವಾರ ನಡೆದಿದೆ.
ಉಪ್ಪುಂದ ಗ್ರಾಮದ ಪಾಳ್ಯದರ ತೋಪ್ಲು ಪುರ್ಶುಯ್ಯನ ಪುಂಡಲೀಕ ಎನ್ನುವವರ ಮಾಲಿಕತ್ವದ ಶ್ರೀದುರ್ಗಾಪರಮೇಶ್ವರಿ ಎನ್ನುವ ದೋಣಿಯಲ್ಲಿ ಶುಕ್ರವಾರ 9 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಅಲೆಯ ಹೊಡೆತಕ್ಕೆ ಸಿಲುಕಿದ ದೋಣಿ ಪಲ್ಟಿ ಹೊಡೆದು ಮುಳುಗಿದೆ.ತಕ್ಷಣದಲ್ಲಿ ಮಾಹಿತಿ ಸಿಕ್ಕಿದ್ದರಿಂದ ಘಟನೆ ಸ್ಥಳಕ್ಕೆ ದೋಣಿಗಳ ಮೂಲಕ ದೌಡಾಯಿಸಿದ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.ಕೂದಲೆಳೆ ಅಂತರದಲ್ಲಿ ಬಾರಿ ದೊಡ್ಡ ಅನಾಹುತವೊಂದು ತಪ್ಪಿದ್ದು ಮೀನುಗಾರರು ನಿಟ್ಟುಸಿರು ಬಿಟ್ಟಿದ್ದಾರೆ.ಮೀನುಗಾರಿಕೆ ತೆರಳುವ ಸಂದರ್ಭದಲ್ಲಿ ಲೈಫ್ ಜಾಕೇಟ್ ಬಳಕೆ ಮಾಡುವಂತೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮನವಿಯನ್ನು ಮಾಡಿಕೊಂಡಿದ್ದಾರೆ.ಒಂದು ವಾರದೊಳಗೆ ಸಂಭವಿಸಿದ ಇದು ಎರಡನೆ ದೋಣಿ ದುರಂತವಾಗಿದೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…