ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಪ್ರಕರಣ:ಎಸ್.ಐ.ಟಿ ತನಿಖೆಗೆ ವಹಿಸುವಂತೆ ಮನವಿ

Share

Advertisement
Advertisement
Advertisement

ಕುಂದಾಪುರ:ಉಡುಪಿಯಲ್ಲಿನ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಗೆ ವರ್ಗಾಯಿಸಲು ರಾಜ್ಯ ಸರಕಾರಕ್ಕೆ ಆದೇಶ ನೀಡುವಂತೆ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಕರಾವಳಿ ಭಾಗದ ಶಾಸಕರ ನಿಯೋಗವು ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.ಕರಾವಳಿ ಭಾಗದ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದಾದ ಬೈಂದೂರು ತಾಲೂಕಿನಲ್ಲಿ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲು ಹಾಗೂ ಸಹಕಾರ ನೀಡುವಂತೆ ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ರೋಹಿತ್ ಶೆಟ್ಟಿ ಹಾಗೂ,ಮಣಿಪಾಲ ಆಸ್ಪತ್ರೆಯ ಬೆಂಗಳೂರು ಮುಖ್ಯಸ್ಥರಾದ ಡಾ.ಸುದರ್ಶನ್ ಬಲ್ಲಾಳ್ ಅವರೊಂದಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಮಾತುಕತೆ ನಡೆಸಿದರು.

(ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು,
ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಹಾಗೂ ಮಣಿಪಾಲ ಆಸ್ಪತ್ರೆ ಬೆಂಗಳೂರು ಮುಖ್ಯಸ್ಥರಾದ ಸುದರ್ಶನ್ ಬಲ್ಲಾಳ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು
)

Advertisement


Share

Leave a comment

Your email address will not be published. Required fields are marked *

You cannot copy content of this page