ನಾಡ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸುವಂತೆ ಸಾರ್ವಜನಿಕರ ಆಗ್ರಹ

Share

Advertisement
Advertisement
Advertisement

ಕುಂದಾಪುರ:ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ತೊಂದರೆ ಆಗುತ್ತಿದ್ದು ಸರಕಾರಿ ಆಸ್ಪತ್ರೆಯಲ್ಲಿರುವ ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನಾಡ,ಪಡುಕೋಣೆ,ಹಡವು,ಸೇನಾಪುರ ,ಬಡಾಕೆರೆ,ಮೊವಾಡಿ,ಹೆಮ್ಮುಂಜೆ ಭಾಗದ ಜನರು ನಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ.ದಿನಂಪ್ರತಿ ನೂರಾರು ಸಂಖ್ಯೆಯಲ್ಲಿ ಜನರು ಆಸ್ಪತ್ರೆಗೆ ಆಗಮಿಸುತ್ತಿರುವುದರಿಂದ ರೋಗಿಗಳನ್ನು ಆರೈಕೆ ಮಾಡಲು ಬೆರಳೆಣಿಕೆಯಲ್ಲಿರುವ ಸಿಬ್ಬಂದಿಗಳಿಗೆ ಕಷ್ಟವಾಗುತ್ತಿದೆ.ಸಿಬ್ಬಂದಿಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಂಡರೆ ಸಿಬ್ಬಂದಿಗಳಿಗೂ ಒತ್ತಡ ಕಡಿಮೆ ಆಗಲಿದೆ.ಸಾರ್ವಜನಿಕರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯಲಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯ.ತಾಲೂಕು ಆಸ್ಪತ್ರೆಯಿಂದ ಸುಮಾರು 20.ಕಿ.ಮೀ ದೂರದಲ್ಲಿರುವ ನಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕ್ಕೆನ್ನುವುದು ಸಾರ್ವಜನಿಕರ ಬಹು ವರ್ಷದ ಬೇಡಿಕೆ.ಸರಕಾರಿ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಿದರೆ ಗ್ರಾಮೀಣದ ಪ್ರದೇಶದ ಸಾವಿರಾರು ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page