ಉಡುಪಿ

ಹೆದ್ದಾರಿಗೆ ಬಂದ ನಾಗರ ಹಾವು,ಟಿಪ್ಪರ್‌ನೊಳಗೆ ನುಗ್ಗಿಆವಾಂತರ

Share

Advertisement
Advertisement
Advertisement

ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ಬಳಿ ಹೆದ್ದಾರಿಯನ್ನು ದಾಟುತ್ತಿದ್ದ ನಾಗರ ಹಾವೊಂದು ಪಾರ್ಕ್ ಮಾಡಿದ್ದ ಟಿಪ್ಪನೊಳಗೆ ಹೊಕ್ಕಿ ಆವಾಂತರ ಸೃಷ್ಟಿಸಿದ ಘಟನೆ ನಡೆದಿದೆ.
ರಸ್ತೆಯನ್ನು ದಾಟುತ್ತಿದ್ದ ನಾಗರ ಹಾವು ವಾಹನಗಳ ಚಕ್ರದಡಿಗೆ ಸಿಲುಕದಂತೆ ರಕ್ಷಿಸುವ ನಿಟ್ಟಿನಲ್ಲಿ ಸ್ಥಳೀಯರು ಸುರಕ್ಷಿತ ಪ್ರದೇಶಕ್ಕೆ ತೆರಳಲು ದಾರಿ ಮಾಡಿಕೊಡುತ್ತಿದ್ದ ಸಂದರ್ಭ ಅದೇ ಮಾರ್ಗದಲ್ಲಿ ಬರುತ್ತಿದ್ದ ಟಿಪ್ಪರ್ ಚಾಲಕನೋರ್ವ,ಹಾವನ್ನು ರಕ್ಷಣೆ ಮಾಡುತ್ತಿರುವುದನ್ನು ವೀಕ್ಷಿಸಲು ತನ್ನ
ಟಿಪ್ಪರನ್ನು ರಸ್ತೆ ಬದಿ ಪಾರ್ಕ್ ಮಾಡಿ ಬಂದಿದ್ದ.
ಅಷ್ಟರಲ್ಲಿ ರಸ್ತೆ ದಾಟುತ್ತಿದ್ದ ಹಾವು ನೇರವಾಗಿ ಟಿಪ್ಪರ್ ಅಡಿಯಿಂದ ಮೇಲೇರಿ ಟಿಪ್ಪರ್ ಒಳಗೆ ಸೇರಿ ಕುಳಿತಿತ್ತು. ಸ್ಥಳದಲ್ಲಿದ್ದವರು ಎಷ್ಟು ಪ್ರಯತ್ನಿಸಿದರೂ ಜಪ್ಪೆನ್ನದಾಗ
ಉರಗ ತಜ್ಞ ಗೋವರ್ಧನ್ ಭಟ್ ಅವರು ಸ್ಥಳಕ್ಕೆ ಧಾವಿಸಿ ಟಿಪ್ಪರ್‌ನೊಳಗೆ ಅವಿತು ಕುಳಿತಿದ್ದ ನಾಗರ ಹಾವನ್ನು ಹೊರಗೆ ತೆಗೆದು,ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದು ಬಿಟ್ಟಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago