ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಬೈಕ್ ಅಪಘಾತ,ಮೂವರಿಗೆ ಗಾಯ
ಕುಂದಾಪುರ:ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸಾವರರಿಬ್ಬರಿಗೂ ಗಾಯವಾಗಿದೆ.ಸಹ ಸವಾರ ಸುರೇಶ್ ಜೋಗಿ ಬೈಂದೂರು ಎನ್ನುವ ವ್ಯಕ್ತಿಯೊಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಭಾನುವಾರ ನಡೆದಿದೆ.ಇಬ್ರಾಹಿಂ ಗಂಗೊಳ್ಳಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.ಗಂಗೊಳ್ಳಿ ಠಾಣೆ ಪೊಲೀಸ್ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಅವೈಜ್ಞಾನಿಕತೆಯಿಂದ ಕೂಡಿದ ಮುಳ್ಳಿಕಟ್ಟೆ ಸರ್ಕಲ್ ಅನ್ನು ಸರಿ ಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
(ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ)
![](https://kundapurtimes.com/wp-content/uploads/2023/08/WhatsApp-Image-2023-08-06-at-7.55.19-PM-1024x1002.jpeg)