ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ
ಕುಂದಾಪುರ:ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರು-ಶಿಕ್ಷಕರ ಸಭೆ ನಡೆಯಿತು.ಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ ಮಾತನಾಡಿ,ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಬದಲಾದ ಪರೀಕ್ಷಾ ಪದ್ದತಿ ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಕುರಿತು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಡುಪಿ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿ,ಸ್ಪರ್ಧಾತ್ಮಕ ಯುಗದಲ್ಲಿ ಸಿ.ಎ/ಸಿ.ಎಸ್ ನಂತಹ ಕೋರ್ಸ್ಗಳು ಬಹಳಷ್ಟು ಪ್ರಯೋಜನಕಾರಿ ಆಗಿವೆ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಕಲಿಕೆಯ ಜತೆ ಜೊತೆಗೆ ಸಿ.ಎ/ಸಿ.ಎಸ್ ನಂತಹ ಕೋರ್ಸ್ಗಳನ್ನು ಅಭ್ಯಾಸ ಮಾಡಿದರೆ ಸಾಕಷ್ಟು ಅವಕಾಶಗಳು ಲಭಿಸುತ್ತವೆ ಎಂದು ಪೂರ್ಣ ಮಾಹಿತಿ ನೀಡಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ,ಬೋಧಕೇತರ ವೃಂದವರು,ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ನಿರೂಪಿಸಿದರು.ಉಪನ್ಯಾಸಕ ಅಭಿಜಿತ್ ವಂದಿಸಿದರು.ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ,ಕಲಿಕಾ ಪ್ರಗತಿ ಕುರಿತು ಚರ್ಚಿಸಲಾಯಿತು.