ಉಡುಪಿ:ಸಾಮಾಜಿಕ ನ್ಯಾಯದ ಅಡಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಾನು ಉತ್ಸುಕನಾಗಿದ್ದೇನೆ ಎಂದು ಬಿಜೆಪಿ ಪಕ್ಷದ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಬ್ರಹ್ಮವಾರ ತಾಲೂಕಿನ ಅಮ್ಮುಂಜೆಯ ತಮ್ಮ ನಿವಾಸದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೆಶೀಸಿ ಮಾತನಾಡಿದ ಅವರು ಪಕ್ಷವೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶವನ್ನು ನೀಡಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೇಲೆ ಕಣ್ಣನ್ನು ಇಟ್ಟಿರುವ ಅವರು, ಪಕ್ಷದ ವತಿಯಿಂದ ಟಿಕೆಟ್ ನೀಡಿದ್ದಲ್ಲಿ ಎಲ್ಲರ ಆರ್ಶೀವಾದ ಪಡೆದು ಮತದಾರರ ಸಹಕಾರದಿಂದ ಎಲೆಕ್ಷನ್ ಎದುರಿಸಲು ಸಿದ್ದನಿದ್ದೇನೆ ಎಂದು ಹೇಳಿದರು.ಈ ವರೆಗೆ ಪಕ್ಷ ಯಾವುದೆ ರೀತಿ ಪ್ರಮುಖ ಜವಾಬ್ದಾರಿಯನ್ನು ನೀಡಿಲ್ಲ.ಪಕ್ಷದ ನಿರ್ದೇಶನದಂತೆ ವಿಧಾನಸಭೆ ಚುನಾವಣೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದೇನೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಒಬ್ಬ ಪ್ರಬಲ ಆಕಾಂಕ್ಷಿಯಾಗಿದ್ದೇನೆ,ಶಾಸಕನಾಗಿ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಿದ ಅನುಭವ ಇದೆ ಎಂದು ಹೇಳಿದರು.ತಾನು ಬಿಜೆಪಿಯನ್ನು ತೊರೆಯುತ್ತೇನೆ ಎನ್ನುವುದು ಅಪಪ್ರಚಾರದ ಸುದ್ದಿ.ನನ್ನ ರಾಜಕೀಯ ನಿವೃತ್ತಿ ಬಿಜೆಪಿಯಿಂದಲೇ ಆಗುತ್ತದೆ,ಕೊನೆ ತನಕ ಬಿಜೆಪಿಗಾಗಿ ದುಡಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…