ಉಡುಪಿ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಮೋದ್ ಮಧ್ವರಾಜ್ ಇಂಗಿತ-ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೇಲೆ ದೃಷ್ಟಿ

Share

ಉಡುಪಿ:ಸಾಮಾಜಿಕ ನ್ಯಾಯದ ಅಡಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಾನು ಉತ್ಸುಕನಾಗಿದ್ದೇನೆ ಎಂದು ಬಿಜೆಪಿ ಪಕ್ಷದ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಬ್ರಹ್ಮವಾರ ತಾಲೂಕಿನ ಅಮ್ಮುಂಜೆಯ ತಮ್ಮ ನಿವಾಸದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೆಶೀಸಿ ಮಾತನಾಡಿದ ಅವರು ಪಕ್ಷವೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶವನ್ನು ನೀಡಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೇಲೆ ಕಣ್ಣನ್ನು ಇಟ್ಟಿರುವ ಅವರು, ಪಕ್ಷದ ವತಿಯಿಂದ ಟಿಕೆಟ್ ನೀಡಿದ್ದಲ್ಲಿ ಎಲ್ಲರ ಆರ್ಶೀವಾದ ಪಡೆದು ಮತದಾರರ ಸಹಕಾರದಿಂದ ಎಲೆಕ್ಷನ್ ಎದುರಿಸಲು ಸಿದ್ದನಿದ್ದೇನೆ ಎಂದು ಹೇಳಿದರು.ಈ ವರೆಗೆ ಪಕ್ಷ ಯಾವುದೆ ರೀತಿ ಪ್ರಮುಖ ಜವಾಬ್ದಾರಿಯನ್ನು ನೀಡಿಲ್ಲ.ಪಕ್ಷದ ನಿರ್ದೇಶನದಂತೆ ವಿಧಾನಸಭೆ ಚುನಾವಣೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದೇನೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಒಬ್ಬ ಪ್ರಬಲ ಆಕಾಂಕ್ಷಿಯಾಗಿದ್ದೇನೆ,ಶಾಸಕನಾಗಿ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡಿದ ಅನುಭವ ಇದೆ ಎಂದು ಹೇಳಿದರು.ತಾನು ಬಿಜೆಪಿಯನ್ನು ತೊರೆಯುತ್ತೇನೆ ಎನ್ನುವುದು ಅಪಪ್ರಚಾರದ ಸುದ್ದಿ.ನನ್ನ ರಾಜಕೀಯ ನಿವೃತ್ತಿ ಬಿಜೆಪಿಯಿಂದಲೇ ಆಗುತ್ತದೆ,ಕೊನೆ ತನಕ ಬಿಜೆಪಿಗಾಗಿ ದುಡಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago