ಕುಂದಾಪುರ:ಸಮಾಜದಲ್ಲಿ ಅಡಗಿರುವ ದುಷ್ಟಶಕ್ತಿಗಳಿಂದ ರಕ್ಷಣೆ ಪಡೆಯಲು ಹೆಣ್ಣು ಮಕ್ಕಳಿಗೆ ಮಾರ್ಗದರ್ಶನ,ತಿಳುವಳಿಕೆ ಹೆಚ್ಚು ಹೆಚ್ಚು ನೀಡುವ ಪ್ರಯತ್ನವನ್ನು ಸ್ವಸ್ಥ ಸಮಾಜ ಮಾಡಬೇಕೆಂದು ಸೇವಾ ಸಂಗಮ ಟ್ರಸ್ಟ್ನ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಹೇಳಿದರು.
ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಗಂಗೊಳ್ಳಿ ಎಸ್.ವಿ.ಪದವಿಪೂರ್ವ ಕಾಲೇಜಿನ ರೋಟರಿ ಒಳಾಂಗಣದಲ್ಲಿ ಭಾನುವಾರ ನಡೆದ ಕಿಶೋರಿ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಉಷಾ ಪಿ.ಮಡಿವಾಳ ಉದ್ಘಾಟಿಸಿದರು,ರಾಮಪ್ರಸಾದ್ ಹರಿಹರಪುರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ಶಶಿಕಲಾ,ಶಿಶು ಮಂದಿರದ ಸಂಚಾಲಕ ಡಾ.ಕಾಶೀನಾಥ ಪೈ,ಕಾರ್ಯದರ್ಶಿ ಅಶ್ವಿತಾ ಜಿ.ಪೈ,ಮಾತಾಜಿ ಪ್ರೇಮಾ,ರತ್ನಾ ಉಪಸ್ಥಿತರಿದ್ದರು.ಬಿ.ರಾಘವೇಂದ್ರ ಪೈ ಸ್ವಾಗತಿಸಿದರು.ಶ್ರೀನಿವಾಸ ಎಂ,ಸವಿತಾ ಯು.ದೇವಾಡಿಗ,ವಸಂತಿ ಎನ್.ಖಾರ್ವಿ ಸಹಕರಿಸಿದರು.ಬಿ.ಲಕ್ಷ್ಮೀಕಾಂತ ಮಡಿವಾಳ ನಿರ್ವಹಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…