ಕುಂದಾಪುರ

ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ:ಸಿಎ ಫಲಿತಾಂಶದಲ್ಲಿ ಶ್ರೇಷ್ಠ ಸಾಧನೆ

Share

ಕುಂದಾಪುರ:-ಸಿಎ/ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಕುಂದಾಪುರದ ಕುಂದೇಶ್ವರ ದೇವಸ್ಥಾನ ರಸ್ತೆ,ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಸರಾಂತ ಸಂಸ್ಥೆ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಜೂನ್- 2023ರಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ವಿಶಿಷ್ಟವಾದ ರೀತಿಯಲ್ಲಿ ಸಾಧನೆಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಅನ್ವಿತಾ ಎ(286),ಕೃತಿಕಾ (248),ಪೌರ್ಣಮಿ ಐತಾಳ್ (243), ಪ್ರೇಕ್ಷಿತಾ (243), ದೀಕ್ಷಿತಾ ಗೋಪಾಲ್ (238), ಚಿರಾಗ್ ಮೆಂಡನ್ (232), ಶ್ರಾವ್ಯ ಪೂಜಾರಿ (227), ಸುಜನಾ(223), ಆಶಿಷ್ ಶೆಟ್ಟಿ(222), ತರುಣ್ (218), ಅಶ್ವಿತಾ (216), ಸುಜೇತಾ ಶೆಟ್ಟಿ (214), ಅಖಿಲೇಶ್ (211), ಪೂಜಾ ಶೇಟ್(210), ಸೂರಜ್ ಆಚಾರ್ (208), ನಿಶಿತಾ (207), ತೇಜಸ್ವಿ ಪೋಜಾರಿ (207), ಛಾಯ ಕಿರಣ್ (205), ಸುಶ್ಮಿತಾ (200), ಶ್ರಾವ್ಯ ಭಟ್ (200) ಅಂಕಗಳೊಂದಿಗೆ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶಿಕ್ಷ ಪ್ರಭ ಅಕಾಡೆಮಿಯು ಕಳೆದ ಕೆಲವು ವರ್ಷಗಳಿಂದ ಸಿಎ ಮತ್ತು ಸಿಎಸ್ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ನ ಎಲ್ಲಾ ಹಂತದ ಪರೀಕ್ಷೆಯಲ್ಲೂ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ.
ಸಂಸ್ಥೆಯಲ್ಲಿ ಬೋಧಕ ಸಿಬ್ಭಂದಿಗಳಾಗಿ ಪಾಠ ಪ್ರವಚನಗಳನ್ನು ಮಾಡುತ್ತಿರುವ ಅನುಭವಿ ಲೆಕ್ಕ ಪರಿಶೋಧಕರು, ತರಬೇತುದಾರರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮ ಪ್ರತಿ ಬ್ಯಾಚ್‌ನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತಿದ್ದು. ಬೋಧಕ ಸಿಬ್ಬಂಧಿ ವರ್ಗದವರಿಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್‌ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

(ಕುಂದಾಪುರದಲ್ಲಿ ಪ್ರೊಫೆಷನಲ್ ಕೋರ್ಸ್ ಗಳ ಮೂಲಕ ಉತ್ತಮ ಶಿಕ್ಷಣವನ್ನು ನೀಡುತ್ತಿರುವ “ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ” ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಬಹಳಷ್ಟು ಸಹಕಾರಿಯಾಗಿದ್ದು, ಸ್ಥಳೀಯವಾಗಿ ಪ್ರೊಫೆಷನಲ್ ಕೋರ್ಸ್ ಗಳನ್ನು ಮಾಡಬಹುದಾಗಿದೆ.ಈ ಹಿಂದೆ ವಿದ್ಯಾರ್ಥಿಗಳು ಪ್ರೊಫೆಷನಲ್ ಕೋರ್ಸ್ ಮಾಡಲು ದೂರದ ಊರುಗಳಿಗೆ ಹೋಗಬೇಕಾಗಿತ್ತು)

(ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ,ಸಿಎ ಫಲಿತಾಂಶದಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳು)

                       
-ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿರುವುದು ನನಗೆ ತುಂಬಾ ಖುಷಿ‌ ಕೊಟ್ಟಿದೆ.ನನಗೆ ಉತ್ತಮ ತರಬೇತಿ ನೀಡಿದ ಶಿಕ್ಷ ಪ್ರಭಾ ಸಂಸ್ಥೆ ಹಾಗೂ ನನ್ನ ಪೋಷಕರ ಪ್ರೋತ್ಸಾಹ ನನಗೆ ಸಹಾಯವಾಗಿದೆ .ಇದಕ್ಕೆನಾನುಶಿಕ್ಷಕವೃಂದ ಹಾಗೂ ನನ್ನ ಪೋಷಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.-

 ಸಿಎ ಫೌಂಡೇಶನ್ಉತ್ತೀರ್ಣ ವಿದ್ಯಾರ್ಥಿನಿ
 ಅನ್ವಿತಾ ಎ.
Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago