ಕುಂದಾಪುರ

ಗೋಡಂಬಿ ಸಂಸ್ಕರಣ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಮನವಿ.

Share

Advertisement
Advertisement

ಕುಂದಾಪುರ:ಆರ್ಥಿಕ ಸಂಕಷ್ಟದಲ್ಲಿರುವ ಕರಾವಳಿ ಭಾಗದ ಗೋಡಂಬಿ ಸಂಸ್ಕರಣಾ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದರು.

Advertisement

ಗೋಡಂಬಿ ಸಂಸ್ಕರಣಾ ಉದ್ಯಮ ಎದುರಿಸುತ್ತಿರುವ ಎರಡೆರಡು ಇಎಂಐ ಪಾವತಿಯ ಭಾರದ ಬಗ್ಗೆ ವಿತ್ತ ಸಚಿವರ ಗಮನ ಸೆಳೆದ‌ ಸಂಸದರು.ಈ ಸಂಬಂಧ ಮಧ್ಯ ಪ್ರವೇಶಿಸಿ ಇಎಂಐ ಭಾರ ಕಡಿಮೆ ಮಾಡಲು ವಿನಂತಿಸಿದರು.ಕರಾವಳಿ ಕರ್ನಾಟಕ ಭಾಗ ಗೋಡಂಬಿ ಸಂಸ್ಕರಣಾ ಉದ್ಯಮಗಳ ಕೇಂದ್ರವಾಗಿದ್ದು, ರಾಜ್ಯದ ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಜೀವನೋಪಾಯ ಒದಗಿಸಿದೆ. ಗೋಡಂಬಿ ಸಂಸ್ಕರಣೆಯು ಕರಾವಳಿ ಕರ್ನಾಟಕದ ಗ್ರಾಮೀಣ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ, 1.50 ಲಕ್ಷಕ್ಕೂ ಹೆಚ್ಚು ಮಹಿಳೆಯರು ಈ ಉದ್ಯಮದ ಭಾಗವಾಗಿದ್ದು ಆ ಮೂಲಕ, ಗೋಡಂಬಿ ಉದ್ಯಮ ಗ್ರಾಮೀಣ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುತ್ತಿದೆ.ಪ್ರಸ್ತುತ, ಗೋಡಂಬಿ ಸಂಸ್ಕರಣಾ ಘಟಕಗಳು ಕೋವಿಡ್ ಮತ್ತು ಕೋವಿಡ್ ನಂತರದ ಅವಧಿಯ ವಿವಿಧ ರೀತಿಯ
ಸಾಲಗಳನ್ನು ಮರುಪಾವತಿಸಲು ನಾನಾ ರೀತಿಯಲ್ಲಿ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿವೆ. ವಿಯೆಟ್ನಾಂನಿಂದ ಕಡಿಮೆ ಗುಣಮಟ್ಟದ ಕಚ್ಚಾ ಗೋಡಂಬಿ ಆಮದು ಉದ್ಯಮ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ.ಕರ್ನಾಟಕ ಗೋಡಂಬಿ ಉತ್ಪಾದಕರ ಸಂಘವು ಇತ್ತೀಚೆಗೆ ಜುಲೈನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ನೀಡಿದ ಮನವಿಯ ಬಗ್ಗೆಗೂ ಸಂಸದರು ಸಚಿವರ ಗಮನವನ್ನು ಸೆಳೆದಿದ್ದಾರೆ.

ವರ್ಕಿಂಗ್ ಕ್ಯಾಪಿಟಲ್ ಟರ್ಮ್ ಲೋನ್ (ಡಬ್ಲ್ಯೂಟಿಎಲ್ ) ಸಾಲದ ಮರುಪಾವತಿಯನ್ನು ಕನಿಷ್ಠ 18 ತಿಂಗಳುಗಳ ಕಾಲ ಅಮಾನತು (ಮೊರಟೋರಿಯಂ ) ಗೊಳಿಸಿ ಮತ್ತು ಅದಕ್ಕೆ ಅನುಗುಣವಾಗಿ ಮರುಪಾವತಿಯ ಅವಧಿಯನ್ನು ವಿಸ್ತರಿಸುವುದು,
ಗ್ಯಾರಂಟಿಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್ ) 1.0 ರ ಇಎಂಐ ಪಾವತಿ ಮುಕ್ತಾಯ ಹಂತದವರೆಗೆ, ಗ್ಯಾರಂಟಿಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್ ) ವಿಸ್ತರಣೆ ಸಾಲದ (ಕೋವಿಡ್ ಸಾಲ 2.0) ದ ಇ ಇಎಂಐ ಅಮಾನತುಗೊಳಿಸುವುದು, ಹಾಗು ಅದರ ಮರು ಪಾವತಿ ಅವಧಿಯನ್ನು ವಿಸ್ತರಿಸುವುದು, ನಿಧಿಯ ಬಡ್ಡಿ ಅವಧಿಯ ಸಾಲ (ಎಫ್ ಐ ಟಿ ಎಲ್ ) ವನ್ನು ಒದಗಿಸುವಂತೆ ಅವರು ಕೋರಿದ್ದಾರೆ.ಅದೇ ರೀತಿ ಈಗಾಗಲೇ ಆರ್ಥಿಕ ದುಸ್ಥಿತಿಯಲ್ಲಿರುವುದರಿಂದ, ವರ್ಕಿಂಗ್ ಕ್ಯಾಪಿಟಲ್ ಟರ್ಮ್ ಸಾಲ ಹಾಗು ಕೋವಿಡ್ ಸಾಲದ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲು ವಿತ್ತ ಸಚಿವರನ್ನು ಅವರು ಒತ್ತಾಯಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

16 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

16 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

17 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago