ಕುಂದಾಪುರ

ಗೋಡಂಬಿ ಸಂಸ್ಕರಣ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಮನವಿ.

Share

ಕುಂದಾಪುರ:ಆರ್ಥಿಕ ಸಂಕಷ್ಟದಲ್ಲಿರುವ ಕರಾವಳಿ ಭಾಗದ ಗೋಡಂಬಿ ಸಂಸ್ಕರಣಾ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದರು.

ಗೋಡಂಬಿ ಸಂಸ್ಕರಣಾ ಉದ್ಯಮ ಎದುರಿಸುತ್ತಿರುವ ಎರಡೆರಡು ಇಎಂಐ ಪಾವತಿಯ ಭಾರದ ಬಗ್ಗೆ ವಿತ್ತ ಸಚಿವರ ಗಮನ ಸೆಳೆದ‌ ಸಂಸದರು.ಈ ಸಂಬಂಧ ಮಧ್ಯ ಪ್ರವೇಶಿಸಿ ಇಎಂಐ ಭಾರ ಕಡಿಮೆ ಮಾಡಲು ವಿನಂತಿಸಿದರು.ಕರಾವಳಿ ಕರ್ನಾಟಕ ಭಾಗ ಗೋಡಂಬಿ ಸಂಸ್ಕರಣಾ ಉದ್ಯಮಗಳ ಕೇಂದ್ರವಾಗಿದ್ದು, ರಾಜ್ಯದ ಗ್ರಾಮೀಣ ಭಾಗದ ಸಾವಿರಾರು ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಜೀವನೋಪಾಯ ಒದಗಿಸಿದೆ. ಗೋಡಂಬಿ ಸಂಸ್ಕರಣೆಯು ಕರಾವಳಿ ಕರ್ನಾಟಕದ ಗ್ರಾಮೀಣ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ, 1.50 ಲಕ್ಷಕ್ಕೂ ಹೆಚ್ಚು ಮಹಿಳೆಯರು ಈ ಉದ್ಯಮದ ಭಾಗವಾಗಿದ್ದು ಆ ಮೂಲಕ, ಗೋಡಂಬಿ ಉದ್ಯಮ ಗ್ರಾಮೀಣ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುತ್ತಿದೆ.ಪ್ರಸ್ತುತ, ಗೋಡಂಬಿ ಸಂಸ್ಕರಣಾ ಘಟಕಗಳು ಕೋವಿಡ್ ಮತ್ತು ಕೋವಿಡ್ ನಂತರದ ಅವಧಿಯ ವಿವಿಧ ರೀತಿಯ
ಸಾಲಗಳನ್ನು ಮರುಪಾವತಿಸಲು ನಾನಾ ರೀತಿಯಲ್ಲಿ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿವೆ. ವಿಯೆಟ್ನಾಂನಿಂದ ಕಡಿಮೆ ಗುಣಮಟ್ಟದ ಕಚ್ಚಾ ಗೋಡಂಬಿ ಆಮದು ಉದ್ಯಮ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ.ಕರ್ನಾಟಕ ಗೋಡಂಬಿ ಉತ್ಪಾದಕರ ಸಂಘವು ಇತ್ತೀಚೆಗೆ ಜುಲೈನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ನೀಡಿದ ಮನವಿಯ ಬಗ್ಗೆಗೂ ಸಂಸದರು ಸಚಿವರ ಗಮನವನ್ನು ಸೆಳೆದಿದ್ದಾರೆ.

ವರ್ಕಿಂಗ್ ಕ್ಯಾಪಿಟಲ್ ಟರ್ಮ್ ಲೋನ್ (ಡಬ್ಲ್ಯೂಟಿಎಲ್ ) ಸಾಲದ ಮರುಪಾವತಿಯನ್ನು ಕನಿಷ್ಠ 18 ತಿಂಗಳುಗಳ ಕಾಲ ಅಮಾನತು (ಮೊರಟೋರಿಯಂ ) ಗೊಳಿಸಿ ಮತ್ತು ಅದಕ್ಕೆ ಅನುಗುಣವಾಗಿ ಮರುಪಾವತಿಯ ಅವಧಿಯನ್ನು ವಿಸ್ತರಿಸುವುದು,
ಗ್ಯಾರಂಟಿಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್ ) 1.0 ರ ಇಎಂಐ ಪಾವತಿ ಮುಕ್ತಾಯ ಹಂತದವರೆಗೆ, ಗ್ಯಾರಂಟಿಡ್ ಎಮರ್ಜೆನ್ಸಿ ಕ್ರೆಡಿಟ್ ಲೈನ್ (ಜಿಇಸಿಎಲ್ ) ವಿಸ್ತರಣೆ ಸಾಲದ (ಕೋವಿಡ್ ಸಾಲ 2.0) ದ ಇ ಇಎಂಐ ಅಮಾನತುಗೊಳಿಸುವುದು, ಹಾಗು ಅದರ ಮರು ಪಾವತಿ ಅವಧಿಯನ್ನು ವಿಸ್ತರಿಸುವುದು, ನಿಧಿಯ ಬಡ್ಡಿ ಅವಧಿಯ ಸಾಲ (ಎಫ್ ಐ ಟಿ ಎಲ್ ) ವನ್ನು ಒದಗಿಸುವಂತೆ ಅವರು ಕೋರಿದ್ದಾರೆ.ಅದೇ ರೀತಿ ಈಗಾಗಲೇ ಆರ್ಥಿಕ ದುಸ್ಥಿತಿಯಲ್ಲಿರುವುದರಿಂದ, ವರ್ಕಿಂಗ್ ಕ್ಯಾಪಿಟಲ್ ಟರ್ಮ್ ಸಾಲ ಹಾಗು ಕೋವಿಡ್ ಸಾಲದ ಮೇಲಿನ ಬಡ್ಡಿದರವನ್ನು ಕಡಿಮೆ ಮಾಡಲು ವಿತ್ತ ಸಚಿವರನ್ನು ಅವರು ಒತ್ತಾಯಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago