ಕುಂದಾಪುರ

ಸೈಕಲ್‍ನಲ್ಲಿ ದೇಶಾದ್ಯಂತ ಸುತ್ತಿ ಡ್ರಗ್ಸ್ ಜಾಗೃತಿ ಅಭಿಯಾನ

Share

ಕುಂದಾಪುರ:ಗಾಂಜಾ,ಡ್ರಗ್ಸ್‍ನಂತಹ ಮಾದಕ ವಸ್ತುಗಳಿಗೆ ಯುವಕರು ಬಲಿ ಆಗುತ್ತಿರುವ ಹಿನ್ನೆಲೆಯಲ್ಲಿ ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಛತ್ತೀಸ್‍ಗಢ ರಾಯಭಾಗ್ ಮೂಲದ ನಿವಾಸಿ ನೇಮ್ ಕುಮಾರ್ ಎನ್ನುವ ಯುವಕ ಸೈಕಲ್‍ನಲ್ಲೆ ದೇಶಾದ್ಯಂತ ಸುತ್ತಿ ಮಾದಕ ವಸ್ತುಗಳ ವಿರುದ್ಧ ಅಭಿಯಾನವನ್ನು ಕೈಗೊಂಡಿದ್ದಾರೆ.
ಕಳೆದ 75 ದಿನಗಳ ಹಿಂದೆ ಛತ್ತೀಸ್‍ಗಢ ರಾಯಭಾಗ್‍ನಿಂದ ಸೈಕಲ್ ಮೂಲಕ ತೆರಳಿದ್ದ ನೇಮ್ ಕುಮಾರ್ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದಿದ್ದ ಅವರು ಬುಧವಾರ ಕುಂದಾಪುರ ತಾಲೂಕನ್ನು ಪ್ರವೇಶ ಮಾಡಿದ್ದಾರೆ.ಈ ಸೈಕಲ್ ಅಭಿಯಾನ ಒಂದು ವರ್ಷಗಳ ಕಾಲ ಮುಂದುವರೆಯಲಿದ್ದು ದೇಶಾದ್ಯಂತ ಸುತ್ತಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಪರಿಣಾಮದ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಉದ್ದೇಶವಾಗಿದೆ.ಶಾಲಾ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಡ್ರಗ್ಸ್ ಅಭಿಯಾನದ ಅಂಗವಾಗಿ ಸಂವಾದವನ್ನು ಮಾಡಲಾಗುತ್ತದೆ ಎಂದು ಹೇಳುತ್ತಾರೆ.
ನಗರಗಳಲ್ಲಿ ಕಂಡು ಬರುತ್ತಿದ್ದ ಡ್ರಗ್ಸ್ ಜಾಲ ಇತ್ತೀಚಿನ ವರ್ಷಗಳಲ್ಲಿ ಕುಂದಾಪುರ,ಬೈಂದೂರು ತಾಲೂಕಿನ ಹಳ್ಳಿಗಳ ಕಡೆಗೂ ವ್ಯಾಪಿಸಿರುವುದು ಆತಂಕದ ವಿಚಾರವಾಗಿದೆ.ಪೆÇಲೀಸ್ ಠಾಣೆಗಳಲ್ಲಿ ಕೇಸ್‍ಗಳು ದಾಖಲಾಗುತ್ತಿರುವುದು ಇದಕ್ಕೆ ಪುಷ್ಟಿ ನೀಡಿದೆ.
ಕಾಲೇಜು ವಿದ್ಯಾರ್ಥಿಗಳು,ಯುವ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡು ವ್ಯವಹಾರ ನಡೆಸುತ್ತಿರುವ ಡ್ರಗ್ಸ್,ಗಾಂಜಾ ಜಾಲಕ್ಕೆ ಯುವಕರೆ ಸಾರಥಿಗಳು.ಚಾಕಲೇಟ್ ಸಿಗುವಷ್ಟು ಸುಲಭದಲ್ಲಿ ಗಾಂಜಾ,ಡ್ರಗ್ಸ್‍ನಂತಹ ಮಾದಕ ವಸ್ತುಗಳು ಯುವಕರ ಕೈ ಸೇರುತ್ತಿದೆ.ಹೆಣ್ಣು ಮಕ್ಕಳು ಕೂಡ ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗುತ್ತಿರುವುದು ಹೆತ್ತವರ ಚಿಂತೆಗೆ ಕಾರಣವಾಗಿದೆ.
ಶೋಕಿ ಜೀವನಕ್ಕೆ ಯುವಕರು ಬಲಿ:ನಶೆಯನ್ನು ಏರಿಸಿಕೊಳ್ಳುವ ಗೀಳಿಗೆ ಬಿದ್ದ ಯುವ ಸಮುದಾಯ ತಮ್ಮ ಜೀವನದ ಸುಂದರ ದಿನಗಳನ್ನು ಕಳೆದುಕೊಳ್ಳುತ್ತಿರುವುದು ಮಾತ್ರವಲ್ಲದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನ ಕಂಬಿಗಳನ್ನು ಏಣಿಸಿಸುವುದರ ಜತೆಗೆ ಮಾನಸಿಕ ಖಿನ್ನತೆ ಅಂತಹ ರೋಗಗಳಿಗೆ ತುತ್ತಾಗಿ,ಆತ್ಮಹತ್ಯೆಗಳಂತಹ ಕೃತ್ಯಗಳಿಗೂ ಬಲಿಯಾಗುತ್ತಿದ್ದಾರೆ.ಯುವ ಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗ ಬಾರದೆಂದು ಪೊಲೀಸ್ ಇಲಾಖೆ ಮನವಿಯನ್ನು ಮಾಡಿಕೊಳ್ಳುತ್ತಿದೆ.

(ಡ್ರಗ್ಸ್,ಗಾಂಜಾ ಜಾಲಕ್ಕೆ ಯುವಕರೆ ಸಾರಥಿಗಳು:ಶೋಕಿ ಜೀವನಕ್ಕೆ ಯುವ ಸಮುದಾಯ ಬಲಿ)

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago