ಉಡುಪಿ

ಮಿಷನ್ ಇಂದ್ರ ಧನುಷ್ 5.0 ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

Share

ಉಡುಪಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮ ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಿತು.

ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಅವರು ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ಮಕ್ಕಳನ್ನು ಮತ್ತು ಗರ್ಭಿಣಿಯನ್ನು ಕಾಡುವ ಅನೇಕ ಕಾಯಿಲೆಗಳಿಗೆ ಮಿಷನ್ ಇಂದ್ರ ಧನುಷ್ ಅಭಿಯಾನದಲ್ಲಿ ನೀಡುವ ಲಸಿಕೆಗಳು ಪರಿಣಾಮಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ನೀಡಿ,ರೋಗಗಳು ಬಾರದಂತೆ ತಡೆಯಲಿವೆ.ಜಿಲ್ಲೆಯಲ್ಲಿ ಯಾವುದೇ ಅರ್ಹ ಗರ್ಭಿಣಿ ಮತ್ತು ಮಕ್ಕಳು ಈ ಲಸಿಕಾ ಅಭಿಯಾನದಿದಂದ ವಂಚಿತರಾಗದಂತೆ ಎಲ್ಲರಿಗೂ ಲಸಿಕೆ ನೀಡಿ,ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು ನಾಗರೀಕ ಸಮಾಜದಲ್ಲಿನ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ.ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು,ಇದನ್ನೂ ಇನ್ನೂ ಎತ್ತರಕ್ಕೆ ಕೊಂಡೊಯ್ಯ ಬೇಕಿದೆ.
ಜಿಲ್ಲೆಯಲ್ಲಿ ಲಸಿಕೆ ವಂಚಿತ ಗರ್ಭಿಣಿಯರು ಮತ್ತು 0-5 ವರ್ಷದೊಳಗಿನ ಮಕ್ಕಳಿಗೆ ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಕಾರ್ಯಕ್ರಮವನ್ನು,ಆಗಸ್ಟ್ 7 ರಿಂದ 12 ಮೊದಲನೇ ಸುತ್ತು, ಸೆಪ್ಟಂಬರ್ 11 ರಿಂದ 16 ರ ವರೆಗೆ 2 ನೇ ಸುತ್ತು ಹಾಗೂ ಅಕ್ಟೋಬರ್ 9 ರಿಂದ 14 ರ ವರೆಗೆ ಒಟ್ಟು 3 ಸುತ್ತುಗಳಲ್ಲಿ ಆಯೋಜಿಸಲಾಗುತ್ತಿದ್ದು, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯಂತೆ ವಯಸ್ಸಿಗನುಗುಣವಾಗಿ ಲಸಿಕೆ ಪಡೆಯಲು ಅರ್ಹರಾದ ಮತ್ತು ಲಸಿಕೆ ವಂಚಿತರಾದ ಗರ್ಭಿಣಿ ಮತ್ತು ಮಕ್ಕಳಿಗೆ ಲಸಿಕಾ ಶಿಬಿರ ಆಯೋಜಿಸಿ ಲಸಿಕೆ ನೀಡಲಾಗುವುದು.ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 708 ಗರ್ಭಿಣಿಯರು ಮತ್ತು 0-2 ವರ್ಷದೊಳಗಿನ ಲಸಿಕೆಗೆ ಅರ್ಹರಾದ 3188 ಮಕ್ಕಳಿಗೆ ಹಾಗೂ 2-5 ವರ್ಷದೊಳಗಿನ ಲಸಿಕೆ ವಂಚಿತ 16 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು,ಇದಕ್ಕಾಗಿ 294 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ‌ ಎಂದು ಹೇಳಿದರು.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

15 hours ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

24 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago