ಪ್ರಮುಖ

ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಲೋಕೇಶ್ ಖಾರ್ವಿಗೆ ಒಲಿದ ಅಧ್ಯಕ್ಷ ಸ್ಥಾನ

Share

Advertisement
Advertisement
Advertisement

ಬೈಂದೂರು:ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತಿನ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಹಾಲಿ ಪಂಚಾಯತ್ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸುಶೀಲ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿಜೆಪಿ ಪಕ್ಷದ ಬೆಂಬಲಿತ 11 ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ 02 ಸದಸ್ಯರು ಮತ್ತು ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ 01 ಸದಸ್ಯರೊಳಗೊಂಡ ಮರವಂತೆ ಪಂಚಾಯತ್‍ನಲ್ಲಿ ಒಟ್ಟು 14 ಗ್ರಾಮ ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯ ನಾಗರಾಜ ಪಠಗಾರ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು.ಬಿಜೆಪಿ ಪಕ್ಷದ ಬೆಂಬಲಿತ ಇನ್ನೋರ್ವ ಪಂಚಾಯತ್ ಸದಸ್ಯ ಹಾಲಿ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷಗಾದೆಗೆ ಹಂಬಲವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಆಗಬೇಕಾಗಿದ್ದ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.
ತೀವೃವಾಗಿ ಕೂತುಹಲ ಮೂಡಿಸಿದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರಿಂದ ನಡೆದ ಅಡ್ಡ ಮತದಾನ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಿಜೆಪಿ ಪಕ್ಷದ ಸದಸ್ಯನನ್ನು ಬೆಂಬಲಿಸಿದ್ದರಿಂದ ಇಬ್ಬರೂ ಅಭ್ಯರ್ಥಿಗಳು 7 ಸಮಬಲದ ಮತವನ್ನು ಪಡೆದಿದ್ದಾರ್ದೆ.ಅದೃಷ್ಟದ ಚೀಟಿಯನ್ನು ಎತ್ತಿದ್ದಾಗ ಪಂಚಾಯತ್‍ನ ಹಾಲಿ ಉಪಾಧ್ಯಕ್ಷರಾದ ಲೋಕೇಶ್ ಖಾರ್ವಿ ಅವರು ಮರವಂತೆ ಪಂಚಾಯತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದರೂ ಮತದಾನದಲ್ಲಿ ಸೋಲನ್ನು ಕಂಡಿದ್ದಾರೆ.ಅದೃಷ್ಟದ ಚೀಟಿಯಲ್ಲಿ ಬಂಡಾಯ ಅಭ್ಯರ್ಥಿ ಲೋಕೇಶ್ ಖಾರ್ವಿಗೆ ಲಕ್ ಖುಲಾಯಿಸಿದೆ.

Advertisement
Advertisement
Advertisement

Share
Team Kundapur Times

Recent Posts

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…

4 hours ago

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…

2 days ago

ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಉದಯ ಜೋಗಿ ಹೃದಯಘಾತದಿಂದ ನಿಧನ

ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಂದ ಕೈಮಗ್ಗ ಘಟಕಕ್ಕೆ ಕೈಗಾರಿಕಾ ಭೇಟಿ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕೈಮಗ್ಗ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.ಉಡುಪಿ ಬ್ರಹ್ಮಗಿರಿ…

2 weeks ago

ಪರೀಕ್ಷೆಯಲ್ಲಿ ಅಂಕ ನೀಡುವಂತೆ ದೈವದ ಮೊರೆ ಹೋದ ವಿದ್ಯಾರ್ಥಿ

ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ…

3 weeks ago