ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ

Share

Advertisement
Advertisement
Advertisement

ಬೈಂದೂರು:ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಜರುಗಿತು.
ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀವರಾಹ ಸ್ವಾಮಿ,ಶ್ರೀವಿಷ್ಣು ಮತ್ತು ಶ್ರೀ ನರಸಿಂಹ ದೇವರಿಗೆ ವಿಶೇಷ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ನಡೆಯಿತು.ಬೆಳೆಗೆ ಶ್ರೇಯಸ್ಸು ಆಗಲಿ ಎಂದು ರೈತಾಪಿ ಜನರು ಮಳೆ ದೇವರಾದ ಶ್ರೀವರಾಹ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ನವ ಜೋಡಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ ನಾಯಕ್ ಮತ್ತು ಸದಸ್ಯರು,ಅರ್ಚಕರು,ಉಪಾದಿವಂತರು,ನೌಕರ ವರ್ಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

(ಕರ್ಕಾಟಕ ಅಮಾವಾಸ್ಯೆ ಪ್ರಯುಕ್ತ ಭಕ್ತರು ಸಮುದ್ರ ಸ್ನಾನ ಮಾಡಿ ಸೌಪರ್ಣಿಕಾ ನದಿಯಲ್ಲಿ ತೀರ್ಥ ಪ್ರೋಕ್ಷಣೆಮಾಡಿಕೊಂಡ ನಂತರ ಮರವಂತೆ ಮಹಾರಾಜ ಸ್ವಾಮಿ ಶ್ರೀವರಾಹ ದೇವರು ಮತ್ತು ಶ್ರೀ ಗಂಗಾರಧಾರೇಶ್ವರ ಸ್ವಾಮಿ ದರ್ಶನ ಪಡೆದು ಪೂಜೆಯನ್ನು ಸಲ್ಲಿಸಿದರು.ದಿನವಿಡಿ ಬಿಸಿಲಿನಿಂದ ಕೂಡಿದ ವಾತಾವರಣ ಕಂಡು ಬಂದಿದ್ದರಿಂದ ಮರವಂತೆ ಜಾತ್ರೆಗೆ ಭಕ್ತ ಸಮುಹವೆ ಹರಿದು ಬಂದಿದೆ)

Advertisement


Share

Leave a comment

Your email address will not be published. Required fields are marked *

You cannot copy content of this page