ಬೈಂದೂರು:ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಜರುಗಿತು.
ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀವರಾಹ ಸ್ವಾಮಿ,ಶ್ರೀವಿಷ್ಣು ಮತ್ತು ಶ್ರೀ ನರಸಿಂಹ ದೇವರಿಗೆ ವಿಶೇಷ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ನಡೆಯಿತು.ಬೆಳೆಗೆ ಶ್ರೇಯಸ್ಸು ಆಗಲಿ ಎಂದು ರೈತಾಪಿ ಜನರು ಮಳೆ ದೇವರಾದ ಶ್ರೀವರಾಹ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ನವ ಜೋಡಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ ನಾಯಕ್ ಮತ್ತು ಸದಸ್ಯರು,ಅರ್ಚಕರು,ಉಪಾದಿವಂತರು,ನೌಕರ ವರ್ಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
(ಕರ್ಕಾಟಕ ಅಮಾವಾಸ್ಯೆ ಪ್ರಯುಕ್ತ ಭಕ್ತರು ಸಮುದ್ರ ಸ್ನಾನ ಮಾಡಿ ಸೌಪರ್ಣಿಕಾ ನದಿಯಲ್ಲಿ ತೀರ್ಥ ಪ್ರೋಕ್ಷಣೆಮಾಡಿಕೊಂಡ ನಂತರ ಮರವಂತೆ ಮಹಾರಾಜ ಸ್ವಾಮಿ ಶ್ರೀವರಾಹ ದೇವರು ಮತ್ತು ಶ್ರೀ ಗಂಗಾರಧಾರೇಶ್ವರ ಸ್ವಾಮಿ ದರ್ಶನ ಪಡೆದು ಪೂಜೆಯನ್ನು ಸಲ್ಲಿಸಿದರು.ದಿನವಿಡಿ ಬಿಸಿಲಿನಿಂದ ಕೂಡಿದ ವಾತಾವರಣ ಕಂಡು ಬಂದಿದ್ದರಿಂದ ಮರವಂತೆ ಜಾತ್ರೆಗೆ ಭಕ್ತ ಸಮುಹವೆ ಹರಿದು ಬಂದಿದೆ)
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…