ಕುಂದಾಪುರ:ತ್ರಾಸಿ ಗ್ರಾಮ ಪಂಚಾಯತ್ನಲ್ಲಿ ಗುರುವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯತ್ ಸದಸ್ಯ ಮಿಥುನ್ ದೇವಾಡಿಗ ತ್ರಾಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯೆ ಹೇಮಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
06 ಜನ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ 02 ಜನ ಬಿಜೆಪಿ ಪಕ್ಷದ ಸದಸ್ಯರು ಸೇರಿ ಒಟ್ಟು ತ್ರಾಸಿ ಗ್ರಾಮ ಪಂಚಾಯತ್ನಲ್ಲಿ 08 ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜು ಮೆಂಡನ್ ಹಾಗೂ ಬಿಜೆಪಿ ಪಕ್ಷದ ವತಿಯಿಂದ ಮಿಥುನ್ ದೇವಾಡಿಗ ಸ್ಪರ್ಧೆ ಮಾಡಿದ್ದರು.ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಅಡ್ಡ ಮತದಾನ ಮಾಡಿದ್ದರಿಂದ ಬಿಜೆಪಿ ಪಕ್ಷದ ಅಭ್ಯರ್ಥಿ ಮಿಥುನ್ ದೇವಾಡಿಗ ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ 4 ಮತಗಳನ್ನು ಪಡೆದು,ರಾಜು ಮೆಂಡನ್ ಜತೆ ಸಮಲದ ಹೋರಾಟವನ್ನು ನೀಡಿದ್ದಾರೆ.ಅದೃಷ್ಟದ ಚೀಟಿಯಲ್ಲಿ ಲಕ್ ಖುಲಾಯಿಸಿದ್ದರಿಂದ ಪ್ರಥಮ ಬಾರಿಗೆ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಮಿಥುನ್ ದೇವಾಡಿಗ ಅವರು ತ್ರಾಸಿ ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ರಾಜು ದೇವಾಡಿಗ ತ್ರಾಸಿ ಅವರ ಕಾಲದಿಂದಲೂ ಕೈವಶವಾಗಿದ್ದ ತ್ರಾಸಿ ಗ್ರಾಮ ಪಂಚಾಯತಿಯ ಆಡಳಿತ ಮೊದಲ ಬಾರಿಗೆ ಬಿಜೆಪಿ ಪಕ್ಷದ ಪಾಲಾಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…