ಕುಂದಾಪುರ

ಗೋ ಶಾಲೆ ನಿರ್ಮಾಣಕ್ಕೆ ಗೋ ಪ್ರೇಮಿಗಳ ಆಗ್ರಹ

Share

ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿ ಪ್ರದೇಶವಾದ ಹೊಸಾಡು,ನಾವುಂದ,ಮರವಂತೆ,ಬಾರಂದಾಡಿ,ಗಂಗೊಳ್ಳಿ ಸೇರಿದಂತೆ ನಾನಾ ಕಡೆಗಳಲ್ಲಿ ಬೀಡಾಡಿ ಗೋವುಗಳ ಸಂಖ್ಯೆ ಅಧಿಕವಾಗಿದೆ.ರಾತ್ರಿ ಸಮಯದಲ್ಲಿ ಗದ್ದೆಗಳಿಗೆ ದಾಳಿ ಮಾಡುವ ಬೀಡಾಡಿ ಗೋಗಳು ರೈತರಿಗೆ ಉಪದ್ರಕಾರಿಯಾಗಿ ಪರಿಣಮಿಸಿವೆ.ಬೀಡಾಡಿ ಗೋವುಗಳಿಂದ ಆಗುತ್ತಿರುವ ತೊಂದರೆಯನ್ನು ನಿಯಂತ್ರಣಕ್ಕೆ ತರಲು ಗೋ ಶಾಲೆ ನಿರ್ಮಾಣ ಮಾಡಬೇಕ್ಕೆನ್ನುವುದು ಸ್ಥಳೀಯರ ಬೇಡಿಕೆ ಆಗಿದೆ.

(ರಾತ್ರಿ ಹಗಲೆನ್ನದೆ ಭತ್ತದ ಗದ್ದೆಗಳಿಗೆ ದಾಳಿ ಮಾಡುವ ಬೀಡಾಡಿ ಗೋಗಳಿಂದ ತೊಂದರೆ ಆಗುತ್ತಿದೆ ಎಂಬುದು ರೈತರ ಅಳಲು)

ಜಾನುವಾರು ಸಾಗಾಣಿಕೆಯಲ್ಲಿ ರೈತರು ನಿರುತ್ಸಾಹ ತೋರ್ಪಡಿಸುತ್ತಿದ್ದರಿಂದ ಗೋವುಗಳು ಬೀದಿ ಪಾಲಾಗಿದ್ದು,ಇತ್ತೀಚಿನ ದಿನಗಳಲ್ಲಿ ಕೆಲವೊಂದು ಪ್ರದೇಶಗಳಲ್ಲಿ ಬಿಡಾಡಿ ಗೋವುಗಳ ತಿರುಗಾಟ ಅಧಿಕವಾಗಿದೆ.ಗಂಡು ಜಾತಿಯ ಗೋವುಗಳನ್ನು ತಿರಸ್ಕಾರದ ಮನೋಭಾವದಿಂದ ನೋಡುತ್ತಿದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಎತ್ತುಗಳು (ಬಸವ) ಬೀದಿಗಳಲ್ಲಿ ನೆಲೆಸುತ್ತಿವೆ ಇವೊಂದು ಕಾರಣದಿಂದಲೂ ಬೀಡಾಡಿ ಗೋವುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಬೀದಿ ಬದಿಯಲ್ಲಿ ವಾಸ ಮಾಡುತ್ತಿರುವ ಗೋವುಗಳು ಹೆದ್ದಾರಿ ಬದಿಯಲ್ಲಿ ಮಲಗುವುದರಿಂದಲೂ,ರಸ್ತೆ ಮಧ್ಯ ಅಡ್ಡಾದಿಡ್ಡಿ ಒಡಾಡುದರಿಂದಲೂ ವಾಹನಗಳ ಚಕ್ರದಡಿಗೆ ಸಿಲುಕಿ ಗೋವುಗಳು ಮರಣವನ್ನು ಅಪ್ಪುತ್ತಿದ್ದು,ದ್ವಿಚಕ್ರ ವಾಹನ ಸವಾರರ ಜೀವಕ್ಕೂ ಕಂಟಕವಾಗಿ ಪರಿಣಮಿಸಿವೆ.ಗೋವುಗಳಿಗೆ ಸೂಕ್ತವಾದ ನೆಲೆಯನ್ನು ಒದಗಿಸುವ ದೃಷ್ಟಿಯಿಂದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕ್ಕೆನ್ನುವುದು ಸಾರ್ವಜನಿಕರ ಒತ್ತಾಯ.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

18 hours ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 day ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago