ಕುಂದಾಪುರ

ಗೋ ಶಾಲೆ ನಿರ್ಮಾಣಕ್ಕೆ ಗೋ ಪ್ರೇಮಿಗಳ ಆಗ್ರಹ

Share

ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿ ಪ್ರದೇಶವಾದ ಹೊಸಾಡು,ನಾವುಂದ,ಮರವಂತೆ,ಬಾರಂದಾಡಿ,ಗಂಗೊಳ್ಳಿ ಸೇರಿದಂತೆ ನಾನಾ ಕಡೆಗಳಲ್ಲಿ ಬೀಡಾಡಿ ಗೋವುಗಳ ಸಂಖ್ಯೆ ಅಧಿಕವಾಗಿದೆ.ರಾತ್ರಿ ಸಮಯದಲ್ಲಿ ಗದ್ದೆಗಳಿಗೆ ದಾಳಿ ಮಾಡುವ ಬೀಡಾಡಿ ಗೋಗಳು ರೈತರಿಗೆ ಉಪದ್ರಕಾರಿಯಾಗಿ ಪರಿಣಮಿಸಿವೆ.ಬೀಡಾಡಿ ಗೋವುಗಳಿಂದ ಆಗುತ್ತಿರುವ ತೊಂದರೆಯನ್ನು ನಿಯಂತ್ರಣಕ್ಕೆ ತರಲು ಗೋ ಶಾಲೆ ನಿರ್ಮಾಣ ಮಾಡಬೇಕ್ಕೆನ್ನುವುದು ಸ್ಥಳೀಯರ ಬೇಡಿಕೆ ಆಗಿದೆ.

(ರಾತ್ರಿ ಹಗಲೆನ್ನದೆ ಭತ್ತದ ಗದ್ದೆಗಳಿಗೆ ದಾಳಿ ಮಾಡುವ ಬೀಡಾಡಿ ಗೋಗಳಿಂದ ತೊಂದರೆ ಆಗುತ್ತಿದೆ ಎಂಬುದು ರೈತರ ಅಳಲು)

ಜಾನುವಾರು ಸಾಗಾಣಿಕೆಯಲ್ಲಿ ರೈತರು ನಿರುತ್ಸಾಹ ತೋರ್ಪಡಿಸುತ್ತಿದ್ದರಿಂದ ಗೋವುಗಳು ಬೀದಿ ಪಾಲಾಗಿದ್ದು,ಇತ್ತೀಚಿನ ದಿನಗಳಲ್ಲಿ ಕೆಲವೊಂದು ಪ್ರದೇಶಗಳಲ್ಲಿ ಬಿಡಾಡಿ ಗೋವುಗಳ ತಿರುಗಾಟ ಅಧಿಕವಾಗಿದೆ.ಗಂಡು ಜಾತಿಯ ಗೋವುಗಳನ್ನು ತಿರಸ್ಕಾರದ ಮನೋಭಾವದಿಂದ ನೋಡುತ್ತಿದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಎತ್ತುಗಳು (ಬಸವ) ಬೀದಿಗಳಲ್ಲಿ ನೆಲೆಸುತ್ತಿವೆ ಇವೊಂದು ಕಾರಣದಿಂದಲೂ ಬೀಡಾಡಿ ಗೋವುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಬೀದಿ ಬದಿಯಲ್ಲಿ ವಾಸ ಮಾಡುತ್ತಿರುವ ಗೋವುಗಳು ಹೆದ್ದಾರಿ ಬದಿಯಲ್ಲಿ ಮಲಗುವುದರಿಂದಲೂ,ರಸ್ತೆ ಮಧ್ಯ ಅಡ್ಡಾದಿಡ್ಡಿ ಒಡಾಡುದರಿಂದಲೂ ವಾಹನಗಳ ಚಕ್ರದಡಿಗೆ ಸಿಲುಕಿ ಗೋವುಗಳು ಮರಣವನ್ನು ಅಪ್ಪುತ್ತಿದ್ದು,ದ್ವಿಚಕ್ರ ವಾಹನ ಸವಾರರ ಜೀವಕ್ಕೂ ಕಂಟಕವಾಗಿ ಪರಿಣಮಿಸಿವೆ.ಗೋವುಗಳಿಗೆ ಸೂಕ್ತವಾದ ನೆಲೆಯನ್ನು ಒದಗಿಸುವ ದೃಷ್ಟಿಯಿಂದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕ್ಕೆನ್ನುವುದು ಸಾರ್ವಜನಿಕರ ಒತ್ತಾಯ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago