ಕುಂದಾಪುರ

ನಾಗಾನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ

Share

ಕುಂದಾಪುರ:ಧನ,ಧಾನ್ಯ ಉಳ್ಳವರು ಸಾಮಾಜಿಕ ಮನೋಭಾವ ಬೆಳೆಸಿಕೊಂಡು ಸಮಾಜದಲ್ಲಿನ ಅಶಕ್ತರ ಕಷ್ಟಗಳಿಗೆ ಸ್ಪಂದನೆ ಮಾಡುವ ಗುಣಗಳನ್ನು ರೂಢಿಸಿಕೊಂಡಾಗ ಮಾತ್ರ ಜೀವನ ಸಾರ್ಥಕತೆಯನ್ನು ಹೊಂದುತ್ತದೆ.ಇಂದಿನ ಮನುಷ್ಯನ ಜೀವನವು ಹಣದ ಬಲದ ಮೇಲೆ ನಿಂತ್ತಿರುವುದು ಅಪಾಯಕಾರಿ ಆಗಿದೆ ಇದು ದೇವರ ಮೇಲಿನಾ ಭಕ್ತಿ ಮೇಲೆ ಪರಿಣಾಮವನ್ನು ಕೂಡ ಬೀರಿದೆ ಎಂದು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ,ಮುಂಬೈ ಅಧ್ಯಕ್ಷ ರಾಜು ಎಮ್ ಮೆಂಡನ್ ಅಭಿಪ್ರಾಯ ಪಟ್ಟರು.
ಬೈಂದೂರು ತಾಲೂಕಿನ ಮರವಂತೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ನಡೆದ ನಾಗರ ಪಂಚಮಿ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ನಾಗಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ನಾಗಾನುಗ್ರಹ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಶ್ರೀಸುಬ್ರಹ್ಮಣ್ಯ ದೇವಸ್ಥಾನ ಮರಂತೆ ಧರ್ಮದರ್ಶಿ ತಿಮ್ಮ.ವಿ ದೇವಾಡಿಗ ಮಾತನಾಡಿ ನಾಗಾನುಗ್ರಹದಿಂದ ಈ ಭೂಮಿ ಸಂಪತ್ತಿನಿಂದ ಕೂಡಿದೆ ಕಲ್ಮಶವಿಲ್ಲದ ಭಕ್ತಿಯಿಂದ ದೇವರನ್ನು ಪೂಜಿಸಿದಾಗ ಮಾತ್ರ ಸಂಪತ್ತು ನಮಗೆ ಒಲಿಯುತ್ತದೆ ಎಂದರು.
ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸಂಧ್ಯಾ ರಮೇಶ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮರವಂತೆ ಮಹಾರಾಜ ಸ್ವಾಮಿ ವರಾಹ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ ಎಂ ನಾಯಕ್ ಧಾರ್ಮಿಕ ಪ್ರವಚನ ನೀಡಿದರು.ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ ಮುಖ್ಯ ಕಾರ್ಯ ನಿವಾಹಣಾಧಿಕಾರಿ ಶ್ರೀನಿವಾಸ ಅಡಿಗ ಕಬೈಲ್,ಉದ್ಯಮಿ ಮಂಜುನಾಥ ಸೇನಾಪುರ,ಮೀನುಗಾರಿಕೆ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಸಿ.ಎಸ್.ಖಾರ್ವಿ ಕೊಡೇರಿ,ಪದ್ಮಾವತಿ ದೇವಾಡಿಗ,ಪ್ರಕಾಶ್ ಪಡಿಯಾರ್ ಉಪಸ್ಥಿತರಿದ್ದರು.ಎಂ.ಗೋವಿಂದ ನಿರೂಪಿಸಿ,ವಂದಿಸಿದರು.
(ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೋಮವಾರ ವಿಜೃಂಭಣೆಯಿಂದ ನಡೆಯಿತು)

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago