ಕುಂದಾಪುರ

ನಾಗಾನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ

Share

ಕುಂದಾಪುರ:ಧನ,ಧಾನ್ಯ ಉಳ್ಳವರು ಸಾಮಾಜಿಕ ಮನೋಭಾವ ಬೆಳೆಸಿಕೊಂಡು ಸಮಾಜದಲ್ಲಿನ ಅಶಕ್ತರ ಕಷ್ಟಗಳಿಗೆ ಸ್ಪಂದನೆ ಮಾಡುವ ಗುಣಗಳನ್ನು ರೂಢಿಸಿಕೊಂಡಾಗ ಮಾತ್ರ ಜೀವನ ಸಾರ್ಥಕತೆಯನ್ನು ಹೊಂದುತ್ತದೆ.ಇಂದಿನ ಮನುಷ್ಯನ ಜೀವನವು ಹಣದ ಬಲದ ಮೇಲೆ ನಿಂತ್ತಿರುವುದು ಅಪಾಯಕಾರಿ ಆಗಿದೆ ಇದು ದೇವರ ಮೇಲಿನಾ ಭಕ್ತಿ ಮೇಲೆ ಪರಿಣಾಮವನ್ನು ಕೂಡ ಬೀರಿದೆ ಎಂದು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ,ಮುಂಬೈ ಅಧ್ಯಕ್ಷ ರಾಜು ಎಮ್ ಮೆಂಡನ್ ಅಭಿಪ್ರಾಯ ಪಟ್ಟರು.
ಬೈಂದೂರು ತಾಲೂಕಿನ ಮರವಂತೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ನಡೆದ ನಾಗರ ಪಂಚಮಿ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ನಾಗಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ನಾಗಾನುಗ್ರಹ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಶ್ರೀಸುಬ್ರಹ್ಮಣ್ಯ ದೇವಸ್ಥಾನ ಮರಂತೆ ಧರ್ಮದರ್ಶಿ ತಿಮ್ಮ.ವಿ ದೇವಾಡಿಗ ಮಾತನಾಡಿ ನಾಗಾನುಗ್ರಹದಿಂದ ಈ ಭೂಮಿ ಸಂಪತ್ತಿನಿಂದ ಕೂಡಿದೆ ಕಲ್ಮಶವಿಲ್ಲದ ಭಕ್ತಿಯಿಂದ ದೇವರನ್ನು ಪೂಜಿಸಿದಾಗ ಮಾತ್ರ ಸಂಪತ್ತು ನಮಗೆ ಒಲಿಯುತ್ತದೆ ಎಂದರು.
ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸಂಧ್ಯಾ ರಮೇಶ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮರವಂತೆ ಮಹಾರಾಜ ಸ್ವಾಮಿ ವರಾಹ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ ಎಂ ನಾಯಕ್ ಧಾರ್ಮಿಕ ಪ್ರವಚನ ನೀಡಿದರು.ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ ಮುಖ್ಯ ಕಾರ್ಯ ನಿವಾಹಣಾಧಿಕಾರಿ ಶ್ರೀನಿವಾಸ ಅಡಿಗ ಕಬೈಲ್,ಉದ್ಯಮಿ ಮಂಜುನಾಥ ಸೇನಾಪುರ,ಮೀನುಗಾರಿಕೆ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಸಿ.ಎಸ್.ಖಾರ್ವಿ ಕೊಡೇರಿ,ಪದ್ಮಾವತಿ ದೇವಾಡಿಗ,ಪ್ರಕಾಶ್ ಪಡಿಯಾರ್ ಉಪಸ್ಥಿತರಿದ್ದರು.ಎಂ.ಗೋವಿಂದ ನಿರೂಪಿಸಿ,ವಂದಿಸಿದರು.
(ಮರವಂತೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೋಮವಾರ ವಿಜೃಂಭಣೆಯಿಂದ ನಡೆಯಿತು)

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago