ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಬೈಂದೂರಿನಲ್ಲಿ ಹಿಂಜಾವೇ ಪ್ರತಿಭಟನೆ

Share

Advertisement
Advertisement
Advertisement

ಬೈಂದೂರು:ಹಿಂದು ಜಾಗರಣ ವೇದಿಕೆ ಪ್ರಾಂತ ಸಹ ಸಂಚಾಲಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಬಂಧಿಸಿರುದ್ದನ್ನು ಖಂಡಿಸಿ ಬೈಂದೂರು ತಾಲೂಕು ಹಿಂದೂ ಜಾಗರಣ ವೇದಿಕೆ ವತಿಯಿಂದ ಬೈಂದೂರು ಅಂಡರ್ ಪಾಸ್ ಬಳಿ ಪ್ರತಿಭಟನೆ ಮಂಗಳವಾರ ನಡೆಯಿತು.

ಬೈಂದೂರು ತಾಲೂಕು ಸಹ ಸಂಚಾಲಕ ಹರೀಶ್ ಸೇಳ್ಕೋಡ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ,
ಇಂದಿನ ಕಾಂಗ್ರೆಸ್ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಹಿಂದೂ ಸಂಘಟನೆಗಳ ನಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿ ಹಿಂದೂ ಸಂಘಟನೆಗಳ ಸಾಮಾಜಿಕ ಚಳವಳಿಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು ಇದನ್ನು ಹಿಂದೂ ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತದೆ,ಹಿಂದೂ ವಿರೋಧಿ ನೀತಿ ಮುಂದುವರಿಸಿದರೆ ಕಾಂಗ್ರೆಸ್ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಭಟನೆಗಳು ತಾಲೂಕಿನಾದ್ಯಂತ ನಡೆಸಲಾಗುತ್ತದೆ ಎಂದು ಹೇಳಿದರು.

ಹಿಂಜಾವೇ ಜಿಲ್ಲಾ ಸಂಚಾಲಕ ಶಂಕರ ಕೋಟ,ಜಿಲ್ಲಾ ಸಹ ಸಂಚಾಲಕ -ನವೀನ್ ಗಂಗೊಳ್ಳಿ, ವಾಸುದೇವ ಗಂಗೊಳ್ಳಿ, ಗೋಪಾಲ್ ವಸ್ರೆ,ಮಹೇಶ್ ,ರತ್ನಾಕರ ಗಂಗೊಳ್ಳಿ, ತಾಲೂಕು ಸಂಚಾಲಕ -ರಾಜೇಶ್ ಬೈಂದೂರು,ರಾಜೇಶ್ ಮೂಡನಗೆದ್ದೆ,ಮಹೇಶ್ ಬೈಂದೂರು,ವಿಶ್ವ ಹಿಂದೂ ಪರಿಷತ್ತಿನ ಸುಧಾಕರ್ ಶೆಟ್ಟಿ,
ರಾಮ ಸೇನೆಯ ಸುಬ್ರಹ್ಮಣ್ಯ ಕಿರುಮಂಜೇಶ್ವರ,ಬಿಜೆಪಿ ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ,ಶರತ್ ಶೆಟ್ಟಿ ಹಾಗೂ ಬೈಂದೂರು ತಾಲೂಕಿನ ಹಿಂಜಾವೇ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page