ಬೈಂದೂರು:ಹಿಂದು ಜಾಗರಣ ವೇದಿಕೆ ಪ್ರಾಂತ ಸಹ ಸಂಚಾಲಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಬಂಧಿಸಿರುದ್ದನ್ನು ಖಂಡಿಸಿ ಬೈಂದೂರು ತಾಲೂಕು ಹಿಂದೂ ಜಾಗರಣ ವೇದಿಕೆ ವತಿಯಿಂದ ಬೈಂದೂರು ಅಂಡರ್ ಪಾಸ್ ಬಳಿ ಪ್ರತಿಭಟನೆ ಮಂಗಳವಾರ ನಡೆಯಿತು.
ಬೈಂದೂರು ತಾಲೂಕು ಸಹ ಸಂಚಾಲಕ ಹರೀಶ್ ಸೇಳ್ಕೋಡ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ,
ಇಂದಿನ ಕಾಂಗ್ರೆಸ್ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಹಿಂದೂ ಸಂಘಟನೆಗಳ ನಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿ ಹಿಂದೂ ಸಂಘಟನೆಗಳ ಸಾಮಾಜಿಕ ಚಳವಳಿಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು ಇದನ್ನು ಹಿಂದೂ ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತದೆ,ಹಿಂದೂ ವಿರೋಧಿ ನೀತಿ ಮುಂದುವರಿಸಿದರೆ ಕಾಂಗ್ರೆಸ್ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಭಟನೆಗಳು ತಾಲೂಕಿನಾದ್ಯಂತ ನಡೆಸಲಾಗುತ್ತದೆ ಎಂದು ಹೇಳಿದರು.
ಹಿಂಜಾವೇ ಜಿಲ್ಲಾ ಸಂಚಾಲಕ ಶಂಕರ ಕೋಟ,ಜಿಲ್ಲಾ ಸಹ ಸಂಚಾಲಕ -ನವೀನ್ ಗಂಗೊಳ್ಳಿ, ವಾಸುದೇವ ಗಂಗೊಳ್ಳಿ, ಗೋಪಾಲ್ ವಸ್ರೆ,ಮಹೇಶ್ ,ರತ್ನಾಕರ ಗಂಗೊಳ್ಳಿ, ತಾಲೂಕು ಸಂಚಾಲಕ -ರಾಜೇಶ್ ಬೈಂದೂರು,ರಾಜೇಶ್ ಮೂಡನಗೆದ್ದೆ,ಮಹೇಶ್ ಬೈಂದೂರು,ವಿಶ್ವ ಹಿಂದೂ ಪರಿಷತ್ತಿನ ಸುಧಾಕರ್ ಶೆಟ್ಟಿ,
ರಾಮ ಸೇನೆಯ ಸುಬ್ರಹ್ಮಣ್ಯ ಕಿರುಮಂಜೇಶ್ವರ,ಬಿಜೆಪಿ ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ,ಶರತ್ ಶೆಟ್ಟಿ ಹಾಗೂ ಬೈಂದೂರು ತಾಲೂಕಿನ ಹಿಂಜಾವೇ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…