ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ-ಭಾರತೀಯರು ಸಂಭ್ರಮಾಚರಣೆ

Share

Advertisement
Advertisement
Advertisement


ಬೆಂಗಳೂರು-ವಿಶ್ವದಾದ್ಯಂತ ಬಹಳಷ್ಟು ಕುತೂಹಲ ಮೂಡಿಸಿದ ಭಾರತೀಯರ ಮಹತ್ವಾಕಾಂಕ್ಷಿಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿ ನೆರವೇರಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇಸ್ರೋ ವಿಜ್ಞಾನಿಗಳು, ಭಾರತೀಯರು ಸಂಭ್ರಮಾಚರಣೆಯನ್ನು ಮಾಡಿದರು.
ಚಂದ್ರಯಾನ -3 ಉಡಾವಣೆ ಯಶಸ್ವಿನ ಹಾದಿಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಅನ್ನು ಇಳಿಸಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಮಹತ್ವದ ಕೆಲಸವಾಗಿತ್ತು.ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವುದರ ಮುಖೇನ ಶತಕೋಟಿ ಭಾರತೀಯರ ಹಾರೈಕೆ ಫಲಿಸಿದೆ.ಬಹುತೇಕ ಕಾಲ ಕತ್ತಲೆ ಇರುವ ದಕ್ಷಿಣ ಧ್ರುವದಲ್ಲಿ ಇದುವರೆಗೆ ಯಾರೂ ಸಂಶೋಧನೆ ಮಾಡಲು ಮುಂದಾಗದ ಕೆಲಸಕ್ಕೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈ ಹಾಕಿ ಯಶಸ್ಸನ್ನು ಸಾಧಿಸಿರುವುದು ವಿಶ್ವವು ಭಾರತದ ಸಾಧನೆಯನ್ನು ಬೆರಗು ಗಣ್ಣಿನಿಂದ ನೋಡುವಂತೆ ಆಗಿದೆ.

(ಗಂಗೊಳ್ಳಿಯಲ್ಲಿ ಸಂಭ್ರಮಾಚರಣೆ
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ನಾಗರಿಕರು ಪಟಾಕಿ ಸಿಡಿಸಿ,ಸಿಹಿತಿಂಡಿ ಹಂಚಿ,ದೇಶಭಕ್ತಿ ಮೊಳಗಿಸಿ ಸಂಭ್ರಮಾಚರಣೆಯನ್ನು ಮಾಡಿದರು
)

(ಚಂದ್ರಯಾನ -3 ಯಶಸ್ವಿಯಾದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕಿನ ಗುಜ್ಜಾಡಿಯಲ್ಲಿ ಮೋದಿ ಅಭಿಮಾನಿಗಳ ಬಳಗದ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದರು

Advertisement


Share

Leave a comment

Your email address will not be published. Required fields are marked *

You cannot copy content of this page