ಬೆಂಗಳೂರು-ವಿಶ್ವದಾದ್ಯಂತ ಬಹಳಷ್ಟು ಕುತೂಹಲ ಮೂಡಿಸಿದ ಭಾರತೀಯರ ಮಹತ್ವಾಕಾಂಕ್ಷಿಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿ ನೆರವೇರಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇಸ್ರೋ ವಿಜ್ಞಾನಿಗಳು, ಭಾರತೀಯರು ಸಂಭ್ರಮಾಚರಣೆಯನ್ನು ಮಾಡಿದರು.
ಚಂದ್ರಯಾನ -3 ಉಡಾವಣೆ ಯಶಸ್ವಿನ ಹಾದಿಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಅನ್ನು ಇಳಿಸಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಮಹತ್ವದ ಕೆಲಸವಾಗಿತ್ತು.ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವುದರ ಮುಖೇನ ಶತಕೋಟಿ ಭಾರತೀಯರ ಹಾರೈಕೆ ಫಲಿಸಿದೆ.ಬಹುತೇಕ ಕಾಲ ಕತ್ತಲೆ ಇರುವ ದಕ್ಷಿಣ ಧ್ರುವದಲ್ಲಿ ಇದುವರೆಗೆ ಯಾರೂ ಸಂಶೋಧನೆ ಮಾಡಲು ಮುಂದಾಗದ ಕೆಲಸಕ್ಕೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈ ಹಾಕಿ ಯಶಸ್ಸನ್ನು ಸಾಧಿಸಿರುವುದು ವಿಶ್ವವು ಭಾರತದ ಸಾಧನೆಯನ್ನು ಬೆರಗು ಗಣ್ಣಿನಿಂದ ನೋಡುವಂತೆ ಆಗಿದೆ.
(ಗಂಗೊಳ್ಳಿಯಲ್ಲಿ ಸಂಭ್ರಮಾಚರಣೆ
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ನಾಗರಿಕರು ಪಟಾಕಿ ಸಿಡಿಸಿ,ಸಿಹಿತಿಂಡಿ ಹಂಚಿ,ದೇಶಭಕ್ತಿ ಮೊಳಗಿಸಿ ಸಂಭ್ರಮಾಚರಣೆಯನ್ನು ಮಾಡಿದರು)
(ಚಂದ್ರಯಾನ -3 ಯಶಸ್ವಿಯಾದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕಿನ ಗುಜ್ಜಾಡಿಯಲ್ಲಿ ಮೋದಿ ಅಭಿಮಾನಿಗಳ ಬಳಗದ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದರು
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…