ದೇಶ-ವಿದೇಶ

ಚಂದ್ರಯಾನ -3 ತಂಡದಲ್ಲಿ ಕುಂದಾಪುರದ-ಮಂಕಿ ಯುವ ವಿಜ್ಞಾನಿ ಆಕಾಶ್ ಶೆಟ್ಟಿ

Share

Advertisement
Advertisement

ಕುಂದಾಪುರ:ಭಾರತದ ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಿ ಉಡಾವಣೆಗೊಂಡು ಲ್ಯಾಂಡರ್‍ನ ಸಾಫ್ಟ್ ಲ್ಯಾಂಡಿಂಗ್ ಬುಧವಾರ ಯಶಸ್ವಿಯಾಗಿ ನೆರವೇರಿದೆ.ಚಂದ್ರಯಾನ-3 ಟೀಮ್‍ನಲ್ಲಿ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಮಂಕಿ ಕೇಳಾಮನೆ ನಿವಾಸಿ ಪಾರ್ವತಿ ಶೆಟ್ಟಿ ಮತ್ತು ಕೆರಾಡಿ ಗ್ರಾಮದ ಚಪ್ಪರಮಕ್ಕಿ ದಿ.ಅಶೋಕ್ ಶೆಟ್ಟಿ ಅವರ ಮಗ ಯುವ ವಿಜ್ಞಾನಿ ಆಕಾಶ್ ಶೆಟ್ಟಿ ಅವರು ಇರುವುದು ಕುಂದಾಪುರ ತಾಲೂಕಿಗೆ ಹೆಮ್ಮ.

Advertisement

ಯುವ ವಿಜ್ಞಾನಿ ಆಕಾಶ್ ಶೆಟ್ಟಿ ಅವರು ಇಸ್ರೋ ಚಂದ್ರಯಾನ-3 ರಲ್ಲಿ ಸ್ಪೇಸ್ ಕ್ರಾಫ್ಟ್ ಮೆಕ್ಯಾನಿಸಂ ಗ್ರೂಪ್‍ನಲ್ಲಿ ಪ್ರೋಜೆಕ್ಟ್ ಮ್ಯಾನೇಂಜರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.ಯೋಜನೆಯ ಯಶಸ್ಸಿಗೆ ಆಕಾಶ್ ಶೆಟ್ಟಿ ಅವರು ತಮ್ಮದೆ ಆದ ಕೊಡುಗೆಯನ್ನು ನೀಡಿರುವುದು ಯುವ ವಿಜ್ಞಾನಿಗಳಿಗೆ ಇನ್ನಷ್ಟು ಸ್ಫೂರ್ತಿ ನೀಡಿದೆ.ಕುಂದಾಪುರ- ಕೋಟದ ವಿವೇಕ ಜೂನಿಯರ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗವನ್ನು ಮಾಡಿದ ಅವರು ಬಳಿಕ ಹಾಸನದ ಮಲ್ನಾಡ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡಿ,ಎಂ.ಟೆಕ್ ಪೂರೈಸಿದ್ದರು.2015 ರಿಂದ ಆಕಾಶ್ ಶೆಟ್ಟಿ ಅವರು ಇಸ್ರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಅವರು ಚಂದ್ರಯಾನ-2 ರಲ್ಲಿ ಕೂಡ ಕರ್ತವ್ಯವನ್ನು ನಿರ್ವಹಿಸಿದ್ದರು.
ವಿಶ್ವವು ಬೆರಗು ಗಣ್ಣಿನಿಂದ ನೋಡುತ್ತಿದ್ದ ಚಂದ್ರಯಾನ -3 ಯಶಸ್ಸಿಗೆ ಆಕಾಶ್ ಶೆಟ್ಟಿ ಅವರ ತಾಯಿ ಪಾರ್ವತಿ ಶೆಟ್ಟಿ ಮಂಕಿ-ಗುಜ್ಜಾಡಿ ಮತ್ತು ಕುಟುಂಬಸ್ಥರು ಸಂತೋಷವನ್ನು ವ್ಯಕ್ತಪಡಿಸಿದ್ದು ದೇಶಕ್ಕೆ ಮತ್ತು ನಮಗೆ ಹೆಮ್ಮ ಸಂಗತಿ ಆಗಿದೆ ಎಂದು ವಿಜಯ ಕರ್ನಾಟಕದೊಂದಿಗೆ ಖುಷಿಯನ್ನು ಹಂಚಿಕೊಂಡರು. ಪ್ರಸ್ತುತ ಆಕಾಶ್ ಶೆಟ್ಟಿ ಅವರ ಕುಟುಂಬ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ವಾಸವಾಗಿದ್ದಾರೆ.

ಚಂದ್ರಯಾನ -3 ತಂಡದಲ್ಲಿ ನಮ್ಮ ಮನೆ ಹುಡುಗ ಕೆಲಸ ಮಾಡಿವುರುದು ನಮಗೆ ಬಹಳಷ್ಟು ಖುಷಿಕೊಟ್ಟಿದೆ.ಇದೊಂದು ಅದ್ಭುತವಾದ ಕ್ಷಣ.ದೇಶದ ಕೋಟ್ಯಾಂತರ ಜನರ ಆಸೆ ಈಡೇರಿದ ಸಂತೋಷದ ಳಿಗೆಯು ಹೌದು.
-ರತ್ನಾಕರ ಶೆಟ್ಟಿ ಮಂಕಿ-ಗುಜ್ಜಾಡಿ,ದೈಹಿಕ ಶಿಕ್ಷಣ ಶಿಕ್ಷಕರು (ಆಕಾಶ್ ಶೆಟ್ಟಿ ಅವರ ದೊಡ್ಡಮ್ಮನ ಮಗ)


ದೇಶವೆ ಹೆಮ್ಮೆ ಪಡುವಂತ ಯೋಜನೆಯಲ್ಲಿ ನನ್ನ ಮಗ ಕೆಲಸ ಮಾಡಿರುವುದು ನನ್ನ ಜೀವನ ಸಾರ್ಥಕತೆಯನ್ನು ಕಂಡಿದೆ.ಚಂದ್ರಯಾನ- 2 ರಲ್ಲಿ ಹತಾಶೆಯನ್ನು ಪಟ್ಟಿದ್ದ ನಾವು,ಚಂದ್ರಯಾನ-3 ರಲ್ಲಿ ಖುಷಿ ಕಂಡಿದ್ದೇವೆ.ಇವೊಂದು ಕ್ಷಣವನ್ನು ಪದಗಳಿಂದ ಬಣ್ಣಿಸಲು ಸಾಧ್ಯವಿಲ್ಲ.
-ಪಾರ್ವತಿ ಶೆಟ್ಟಿ,ಮಂಕಿ-ಗುಜ್ಜಾಡಿ,ಆಕಾಶ್ ಶೆಟ್ಟಿ ತಾಯಿ

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

20 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

23 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago