ರಾಜ್ಯ

ಚಂದ್ರಯಾ-3 ಯಶಸ್ಸಿಗೆ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಹರ್ಷ

Share

ಬೆಂಗಳೂರು:ಯಶ್ವಸಿಯಾಗಿ ಉಡಾವಣೆಗೊಂಡಿದ್ದ ಚಂದ್ರಯಾನ-2 ,2019 ರ ಸೆಪ್ಟೆಂಬರ್ 6 ರಂದು ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಾಗ ಅಂದಿನ ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು ಕಣ್ಣೀರಿಟ್ಟು ತಮ್ಮ ನೋವಿನ ಭಾವನೆಯನ್ನು ಜಗತ್ತಿನ ಮುಂದಿಟ್ಟಿದ್ದರು.ಯಶಸ್ವಿ ಪ್ರಯೋಗ ಕೊನೆ ಕ್ಷಣದಲ್ಲಿ ಹಾದಿ ತಪ್ಪಿದ್ದಾಗ ಇಡಿ ಭಾರತ ದೇಶ ಶೋಕ ಸಾಗರದಲ್ಲಿ ಮುಳುಗಿ ಹೋಗಿತ್ತು.ವಿಜ್ಞಾನಿಗಳ ಜತೆಗೆ ಭಾರತೀಯರು ಕೂಡ ತಮ್ಮ ದುಗುಡವನ್ನು ಹೊರ ಹಾಕಿರುವುದು ಇನ್ನೂ ಕೂಡ ಕಣ್ಣ ಮುಂದಿದೆ.
ದೇಶದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರನ್ನು ತಬ್ಬಿಕೊಂಡು ಸಾಂತ್ವನದ ಮಾತುಗಳನ್ನು ಆಡಿ,ಈ ದಿನದ ಸೋಲು ಮುಂದಿನ ಗೆಲುವಿಗೆ ದಾರಿ ಮಾಡಿ ಕೊಡಲಿದೆ,ಮುಂದಿನ ಪ್ರಯೋಗಕ್ಕೆ ಸಿದ್ದರಾಗಬೇಕಿದೆ ಎಂದು ಸ್ವತಹ ಪ್ರಧಾನ ಮಂತ್ರಿಗಳು ವಿಜ್ಞಾನಿಗಳನ್ನು ಹುರಿದುಂಬಿಸಿದ ವಿಚಾರ ಜಗತ್ತಿಗೆ ತಿಳಿದಿದೆ.
ಅಂದು ಕಣ್ಣೀರಿಟ್ಟ ಕಣ್ಣುಗಳಲ್ಲಿ ಇಂದು ತುಂಬಿದೆ ಹರ್ಷ:ಚಂದ್ರಯಾನ-2 ರ ಪ್ರಯೋಗ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷರಾಗಿದ್ದ ವಿಜ್ಞಾನಿ ಕೆ.ಶಿವನ್ ಅವರು ಬಹಳಷ್ಟು ನಿರೀಕ್ಷೆಯೊಂದಿಗೆ ತಮ್ಮ ತಂಡವನ್ನು ಕಟ್ಟಿಕೊಂಡು ಗಗನಕ್ಕೆ ನೌಕೆಯನ್ನು ಉಡಾವಣೆ ಮಾಡಿದ್ದರು.ಕೊನೆ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿದ್ದರಿಂದ ಚಂದ್ರಯಾನ-2 ವಿಫಲಗೊಂಡಿದ್ದರು ಅದು ಚಂದ್ರಯಾನ-3 ರ ಯಶಸ್ಸಿಗೆ ದೊಡ್ಡ ಕೊಡುಗೆಯನ್ನು ನೀಡಿದೆ ಎಂದರೆ ತಪ್ಪಾಗಲಾರದು.ಚಂದ್ರನ ದಕ್ಷಿಣ ಧ್ರುವದಲ್ಲಿ ಕಾಲಿಡ ಬೇಕೆಂದು ಕೊಂಡಿದ್ದ ದೇಶದ ಹಿರಿಯ ವಿಜ್ಞಾನಿ ಕೆ.ಶಿವನ್ ಅವರ ಕನಸು 2023 ರ ಆ.23 ರಂದು ಈಡೇರಿಕೆ ಆಗಿದೆ.ಚಂದ್ರಯಾನ-3 ಯಶಸ್ಸಿಗೆ ಅವರು ತುಂಬು ಹೃದಯದಿಂದ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago