ರಾಜ್ಯ

ಚಂದ್ರಯಾ-3 ಯಶಸ್ಸಿಗೆ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಹರ್ಷ

Share

ಬೆಂಗಳೂರು:ಯಶ್ವಸಿಯಾಗಿ ಉಡಾವಣೆಗೊಂಡಿದ್ದ ಚಂದ್ರಯಾನ-2 ,2019 ರ ಸೆಪ್ಟೆಂಬರ್ 6 ರಂದು ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಾಗ ಅಂದಿನ ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು ಕಣ್ಣೀರಿಟ್ಟು ತಮ್ಮ ನೋವಿನ ಭಾವನೆಯನ್ನು ಜಗತ್ತಿನ ಮುಂದಿಟ್ಟಿದ್ದರು.ಯಶಸ್ವಿ ಪ್ರಯೋಗ ಕೊನೆ ಕ್ಷಣದಲ್ಲಿ ಹಾದಿ ತಪ್ಪಿದ್ದಾಗ ಇಡಿ ಭಾರತ ದೇಶ ಶೋಕ ಸಾಗರದಲ್ಲಿ ಮುಳುಗಿ ಹೋಗಿತ್ತು.ವಿಜ್ಞಾನಿಗಳ ಜತೆಗೆ ಭಾರತೀಯರು ಕೂಡ ತಮ್ಮ ದುಗುಡವನ್ನು ಹೊರ ಹಾಕಿರುವುದು ಇನ್ನೂ ಕೂಡ ಕಣ್ಣ ಮುಂದಿದೆ.
ದೇಶದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರನ್ನು ತಬ್ಬಿಕೊಂಡು ಸಾಂತ್ವನದ ಮಾತುಗಳನ್ನು ಆಡಿ,ಈ ದಿನದ ಸೋಲು ಮುಂದಿನ ಗೆಲುವಿಗೆ ದಾರಿ ಮಾಡಿ ಕೊಡಲಿದೆ,ಮುಂದಿನ ಪ್ರಯೋಗಕ್ಕೆ ಸಿದ್ದರಾಗಬೇಕಿದೆ ಎಂದು ಸ್ವತಹ ಪ್ರಧಾನ ಮಂತ್ರಿಗಳು ವಿಜ್ಞಾನಿಗಳನ್ನು ಹುರಿದುಂಬಿಸಿದ ವಿಚಾರ ಜಗತ್ತಿಗೆ ತಿಳಿದಿದೆ.
ಅಂದು ಕಣ್ಣೀರಿಟ್ಟ ಕಣ್ಣುಗಳಲ್ಲಿ ಇಂದು ತುಂಬಿದೆ ಹರ್ಷ:ಚಂದ್ರಯಾನ-2 ರ ಪ್ರಯೋಗ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷರಾಗಿದ್ದ ವಿಜ್ಞಾನಿ ಕೆ.ಶಿವನ್ ಅವರು ಬಹಳಷ್ಟು ನಿರೀಕ್ಷೆಯೊಂದಿಗೆ ತಮ್ಮ ತಂಡವನ್ನು ಕಟ್ಟಿಕೊಂಡು ಗಗನಕ್ಕೆ ನೌಕೆಯನ್ನು ಉಡಾವಣೆ ಮಾಡಿದ್ದರು.ಕೊನೆ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿದ್ದರಿಂದ ಚಂದ್ರಯಾನ-2 ವಿಫಲಗೊಂಡಿದ್ದರು ಅದು ಚಂದ್ರಯಾನ-3 ರ ಯಶಸ್ಸಿಗೆ ದೊಡ್ಡ ಕೊಡುಗೆಯನ್ನು ನೀಡಿದೆ ಎಂದರೆ ತಪ್ಪಾಗಲಾರದು.ಚಂದ್ರನ ದಕ್ಷಿಣ ಧ್ರುವದಲ್ಲಿ ಕಾಲಿಡ ಬೇಕೆಂದು ಕೊಂಡಿದ್ದ ದೇಶದ ಹಿರಿಯ ವಿಜ್ಞಾನಿ ಕೆ.ಶಿವನ್ ಅವರ ಕನಸು 2023 ರ ಆ.23 ರಂದು ಈಡೇರಿಕೆ ಆಗಿದೆ.ಚಂದ್ರಯಾನ-3 ಯಶಸ್ಸಿಗೆ ಅವರು ತುಂಬು ಹೃದಯದಿಂದ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago