ರಾಜ್ಯ

ಚಂದ್ರಯಾ-3 ಯಶಸ್ಸಿಗೆ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಹರ್ಷ

Share

ಬೆಂಗಳೂರು:ಯಶ್ವಸಿಯಾಗಿ ಉಡಾವಣೆಗೊಂಡಿದ್ದ ಚಂದ್ರಯಾನ-2 ,2019 ರ ಸೆಪ್ಟೆಂಬರ್ 6 ರಂದು ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಾಗ ಅಂದಿನ ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು ಕಣ್ಣೀರಿಟ್ಟು ತಮ್ಮ ನೋವಿನ ಭಾವನೆಯನ್ನು ಜಗತ್ತಿನ ಮುಂದಿಟ್ಟಿದ್ದರು.ಯಶಸ್ವಿ ಪ್ರಯೋಗ ಕೊನೆ ಕ್ಷಣದಲ್ಲಿ ಹಾದಿ ತಪ್ಪಿದ್ದಾಗ ಇಡಿ ಭಾರತ ದೇಶ ಶೋಕ ಸಾಗರದಲ್ಲಿ ಮುಳುಗಿ ಹೋಗಿತ್ತು.ವಿಜ್ಞಾನಿಗಳ ಜತೆಗೆ ಭಾರತೀಯರು ಕೂಡ ತಮ್ಮ ದುಗುಡವನ್ನು ಹೊರ ಹಾಕಿರುವುದು ಇನ್ನೂ ಕೂಡ ಕಣ್ಣ ಮುಂದಿದೆ.
ದೇಶದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರನ್ನು ತಬ್ಬಿಕೊಂಡು ಸಾಂತ್ವನದ ಮಾತುಗಳನ್ನು ಆಡಿ,ಈ ದಿನದ ಸೋಲು ಮುಂದಿನ ಗೆಲುವಿಗೆ ದಾರಿ ಮಾಡಿ ಕೊಡಲಿದೆ,ಮುಂದಿನ ಪ್ರಯೋಗಕ್ಕೆ ಸಿದ್ದರಾಗಬೇಕಿದೆ ಎಂದು ಸ್ವತಹ ಪ್ರಧಾನ ಮಂತ್ರಿಗಳು ವಿಜ್ಞಾನಿಗಳನ್ನು ಹುರಿದುಂಬಿಸಿದ ವಿಚಾರ ಜಗತ್ತಿಗೆ ತಿಳಿದಿದೆ.
ಅಂದು ಕಣ್ಣೀರಿಟ್ಟ ಕಣ್ಣುಗಳಲ್ಲಿ ಇಂದು ತುಂಬಿದೆ ಹರ್ಷ:ಚಂದ್ರಯಾನ-2 ರ ಪ್ರಯೋಗ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷರಾಗಿದ್ದ ವಿಜ್ಞಾನಿ ಕೆ.ಶಿವನ್ ಅವರು ಬಹಳಷ್ಟು ನಿರೀಕ್ಷೆಯೊಂದಿಗೆ ತಮ್ಮ ತಂಡವನ್ನು ಕಟ್ಟಿಕೊಂಡು ಗಗನಕ್ಕೆ ನೌಕೆಯನ್ನು ಉಡಾವಣೆ ಮಾಡಿದ್ದರು.ಕೊನೆ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿದ್ದರಿಂದ ಚಂದ್ರಯಾನ-2 ವಿಫಲಗೊಂಡಿದ್ದರು ಅದು ಚಂದ್ರಯಾನ-3 ರ ಯಶಸ್ಸಿಗೆ ದೊಡ್ಡ ಕೊಡುಗೆಯನ್ನು ನೀಡಿದೆ ಎಂದರೆ ತಪ್ಪಾಗಲಾರದು.ಚಂದ್ರನ ದಕ್ಷಿಣ ಧ್ರುವದಲ್ಲಿ ಕಾಲಿಡ ಬೇಕೆಂದು ಕೊಂಡಿದ್ದ ದೇಶದ ಹಿರಿಯ ವಿಜ್ಞಾನಿ ಕೆ.ಶಿವನ್ ಅವರ ಕನಸು 2023 ರ ಆ.23 ರಂದು ಈಡೇರಿಕೆ ಆಗಿದೆ.ಚಂದ್ರಯಾನ-3 ಯಶಸ್ಸಿಗೆ ಅವರು ತುಂಬು ಹೃದಯದಿಂದ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago