ಕುಂದಾಪುರ

ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ವಾರ್ಷಿಕ ಮಹಾಸಭೆ:ಶೇ.10 ಡಿವಿಡೆಂಡ್ ಘೋಷಣೆ

Share

Advertisement
Advertisement
Advertisement

ಕುಂದಾಪುರ:ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ 32ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸಂಘದ ತಲ್ಲೂರು ಮೂರ್ತೆದಾರರ ಸಭಾಭವನದಲ್ಲಿ ಬುಧವಾರ ನಡೆಯಿತು.ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಉದಯ ಪೂಜಾರಿ ಬಡಾಕೆರೆ ಸಭೆಯನ್ನುದ್ದೇಶಿಸಿ ಮಾತನಾಡಿ ಸಂಘವು ಎ ದರ್ಜೆಯ ಆಡಿಟ್ ವರ್ಗೀಕರಣ ಹೊಂದಿದ್ದು ವರದಿ ವರ್ಷದಲ್ಲಿ ರೂ.93,75,152.57 ನಿವ್ವಳ ಲಾಭ ಗಳಿಸಿದೆ.ಈ ಸಾಲಿನಲ್ಲಿ ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡುವುದಾಗಿ ಘೋಷಣೆ ಮಾಡಿದರು.

Advertisement


ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಪೂಜಾರಿ ವರದಿ ಮಂಡಿಸಿ ಮಾತನಾಡಿ,ಸಂಘವು 90,90,950.ರೂ ಪಾಲು ಬಂಡವಾಳವನ್ನು ಹೊಂದಿದೆ.ಶೇ.5.59 ರಷ್ಟು ಪ್ರಗತಿ ಸಾಧಿಸಲಾಗಿದೆ. ವರ್ಷಾಂತ್ಯಕ್ಕೆ ಒಟ್ಟು 9814 ಸದಸ್ಯರಿದ್ದು ವರದಿ ವರ್ಷದಲ್ಲಿ ಸಂಘವು 50,50,83,953.39 ಠೇವಣಿ ಸಂಗ್ರಹಣೆ ಮಾಡಿದ್ದು,ಠೇವಣಿ ಸಂಗ್ರಹಣೆಯಲ್ಲಿ ಶೇ.17.94% ರಷ್ಟು ಹೆಚ್ಚಳ ಸಾಧಿಸಿದೆ.ಪ್ರಸತ್ತ ಸಾಲಿನಲ್ಲಿ ಒಟ್ಟು 39,57,37,389 ಸಾಲ ನೀಡಿದೆ ಇದರಲ್ಲಿ 38,58,84,651.80 ರೂ ಹೊರಬಾಕಿ ಸಾಲ ಇದ್ದು ಶೇ.7.72% ರಷ್ಟು ವೃದ್ಧಿಯಾಗಿದೆ.299 ಕಲ್ಪತರು ಮಹಿಳಾ ಸ್ವಸಹಾಯ ಗುಂಪುಗಳನ್ನು ಪ್ರಯೋಜಿಸಿದ್ದು ಮಹಿಳಾ ಸಶಕ್ತಿಕರಣಕ್ಕಾಗಿ 7,44,22,129.ರೂ ಸಾಲ ನೀಡಲಾಗಿದ್ದು,ಲಾಭಾಂಶ ವಿತರಿಸಲಾಗಿದೆ ಎಂದರು.ಸಂಸ್ಥೆಯು ವರದಿ ವರ್ಷದಲ್ಲಿ ಒಟ್ಟು ವಹಿವಾಟು 227,57,98,267.24 ಇದರಲ್ಲಿ ದುಡಿಯುವ ಬಂಡವಾಳ 55,14,63,397.74 ಹೊಂದಿದೆ.ವಿವಿಧ ಬ್ಯಾಂಕು ಹಾಗೂ ಸಹಕಾರ ಸಂಘಗಳಲ್ಲಿ ಒಟ್ಟು 17,53,18,124.16 ಧನ ವಿನಿಯೋಗ ಮಾಡಲಾಗಿದೆ ಎಂದರು.ಕಲ್ಪತರು ಸ್ವಸಹಾಯ ಗುಂಪುಗಳ ಸದಸ್ಯರುಗಳಿಗೆ ಆಂತರಿಕ ಸಾಲ ಮರುಪಾವತಿ ವಿಷಯದಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿ ನೀಡುವ ತಂತ್ರಾಂಶವನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ನರಸಿಂಹ ಪೂಜಾರಿ ಹಕ್ಲಾಡಿ,ನಿರ್ದೇಶಕರಾದ ಕೃಷ್ಣ ಪೂಜಾರಿ,ಶಂಕರ ಪೂಜಾರಿ,ರಘು ಪೂಜಾರಿ,ನಾರಾಯಣ ಪೂಜಾರಿ,ಶ್ರೀನಿವಾಸ ಪೂಜಾರಿ,ಶೇಖರ ಪೂಜಾರಿ,ಜಯಪದ್ಮ ಸೇನಾಪುರ,ಸರೋಜ ಜಿ.ಪೂಜಾರಿ,ಮಹಾಮಂಡಳದ ನಿರ್ದೇಶಕ ಮಂಜು ಪೂಜಾರಿ ಉಪಸ್ಥಿತರಿದ್ದರು.ನಿರ್ದೇಶಕ ಕೃಷ್ಣ ಪೂಜಾರಿ ಸ್ವಾಗತಿಸಿದರು.ಆಲೂರು ಶಾಖಾ ವ್ಯವಸ್ಥಾಪಕ ನಾಗರಾಜ ಪೂಜಾರಿ ಬಜೆಟ್ ಮಂಡಿಸಿದರು.ಹಿರಿಯ ಲೆಕ್ಕಿಗ ರಮೇಶ ನಿವ್ವಳ ಲಾಭ ವಿಂಗಡಣೆ ವಾಚಿಸಿದರು.ನಾಗರಾಜ ಪೂಜಾರಿ ಕುರು ವಂದಿಸಿದರು.ಸಂಘದ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

(ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ 32ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸಂಘದ ತಲ್ಲೂರು ಮೂರ್ತೆದಾರರ ಸಭಾಭವನದಲ್ಲಿ ಬುಧವಾರ ನಡೆಯಿತು)

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago