ಕುಂದಾಪುರ

ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ವಾರ್ಷಿಕ ಮಹಾಸಭೆ:ಶೇ.10 ಡಿವಿಡೆಂಡ್ ಘೋಷಣೆ

Share

ಕುಂದಾಪುರ:ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ 32ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸಂಘದ ತಲ್ಲೂರು ಮೂರ್ತೆದಾರರ ಸಭಾಭವನದಲ್ಲಿ ಬುಧವಾರ ನಡೆಯಿತು.ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಉದಯ ಪೂಜಾರಿ ಬಡಾಕೆರೆ ಸಭೆಯನ್ನುದ್ದೇಶಿಸಿ ಮಾತನಾಡಿ ಸಂಘವು ಎ ದರ್ಜೆಯ ಆಡಿಟ್ ವರ್ಗೀಕರಣ ಹೊಂದಿದ್ದು ವರದಿ ವರ್ಷದಲ್ಲಿ ರೂ.93,75,152.57 ನಿವ್ವಳ ಲಾಭ ಗಳಿಸಿದೆ.ಈ ಸಾಲಿನಲ್ಲಿ ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡುವುದಾಗಿ ಘೋಷಣೆ ಮಾಡಿದರು.


ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಪೂಜಾರಿ ವರದಿ ಮಂಡಿಸಿ ಮಾತನಾಡಿ,ಸಂಘವು 90,90,950.ರೂ ಪಾಲು ಬಂಡವಾಳವನ್ನು ಹೊಂದಿದೆ.ಶೇ.5.59 ರಷ್ಟು ಪ್ರಗತಿ ಸಾಧಿಸಲಾಗಿದೆ. ವರ್ಷಾಂತ್ಯಕ್ಕೆ ಒಟ್ಟು 9814 ಸದಸ್ಯರಿದ್ದು ವರದಿ ವರ್ಷದಲ್ಲಿ ಸಂಘವು 50,50,83,953.39 ಠೇವಣಿ ಸಂಗ್ರಹಣೆ ಮಾಡಿದ್ದು,ಠೇವಣಿ ಸಂಗ್ರಹಣೆಯಲ್ಲಿ ಶೇ.17.94% ರಷ್ಟು ಹೆಚ್ಚಳ ಸಾಧಿಸಿದೆ.ಪ್ರಸತ್ತ ಸಾಲಿನಲ್ಲಿ ಒಟ್ಟು 39,57,37,389 ಸಾಲ ನೀಡಿದೆ ಇದರಲ್ಲಿ 38,58,84,651.80 ರೂ ಹೊರಬಾಕಿ ಸಾಲ ಇದ್ದು ಶೇ.7.72% ರಷ್ಟು ವೃದ್ಧಿಯಾಗಿದೆ.299 ಕಲ್ಪತರು ಮಹಿಳಾ ಸ್ವಸಹಾಯ ಗುಂಪುಗಳನ್ನು ಪ್ರಯೋಜಿಸಿದ್ದು ಮಹಿಳಾ ಸಶಕ್ತಿಕರಣಕ್ಕಾಗಿ 7,44,22,129.ರೂ ಸಾಲ ನೀಡಲಾಗಿದ್ದು,ಲಾಭಾಂಶ ವಿತರಿಸಲಾಗಿದೆ ಎಂದರು.ಸಂಸ್ಥೆಯು ವರದಿ ವರ್ಷದಲ್ಲಿ ಒಟ್ಟು ವಹಿವಾಟು 227,57,98,267.24 ಇದರಲ್ಲಿ ದುಡಿಯುವ ಬಂಡವಾಳ 55,14,63,397.74 ಹೊಂದಿದೆ.ವಿವಿಧ ಬ್ಯಾಂಕು ಹಾಗೂ ಸಹಕಾರ ಸಂಘಗಳಲ್ಲಿ ಒಟ್ಟು 17,53,18,124.16 ಧನ ವಿನಿಯೋಗ ಮಾಡಲಾಗಿದೆ ಎಂದರು.ಕಲ್ಪತರು ಸ್ವಸಹಾಯ ಗುಂಪುಗಳ ಸದಸ್ಯರುಗಳಿಗೆ ಆಂತರಿಕ ಸಾಲ ಮರುಪಾವತಿ ವಿಷಯದಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿ ನೀಡುವ ತಂತ್ರಾಂಶವನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ನರಸಿಂಹ ಪೂಜಾರಿ ಹಕ್ಲಾಡಿ,ನಿರ್ದೇಶಕರಾದ ಕೃಷ್ಣ ಪೂಜಾರಿ,ಶಂಕರ ಪೂಜಾರಿ,ರಘು ಪೂಜಾರಿ,ನಾರಾಯಣ ಪೂಜಾರಿ,ಶ್ರೀನಿವಾಸ ಪೂಜಾರಿ,ಶೇಖರ ಪೂಜಾರಿ,ಜಯಪದ್ಮ ಸೇನಾಪುರ,ಸರೋಜ ಜಿ.ಪೂಜಾರಿ,ಮಹಾಮಂಡಳದ ನಿರ್ದೇಶಕ ಮಂಜು ಪೂಜಾರಿ ಉಪಸ್ಥಿತರಿದ್ದರು.ನಿರ್ದೇಶಕ ಕೃಷ್ಣ ಪೂಜಾರಿ ಸ್ವಾಗತಿಸಿದರು.ಆಲೂರು ಶಾಖಾ ವ್ಯವಸ್ಥಾಪಕ ನಾಗರಾಜ ಪೂಜಾರಿ ಬಜೆಟ್ ಮಂಡಿಸಿದರು.ಹಿರಿಯ ಲೆಕ್ಕಿಗ ರಮೇಶ ನಿವ್ವಳ ಲಾಭ ವಿಂಗಡಣೆ ವಾಚಿಸಿದರು.ನಾಗರಾಜ ಪೂಜಾರಿ ಕುರು ವಂದಿಸಿದರು.ಸಂಘದ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

(ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ 32ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸಂಘದ ತಲ್ಲೂರು ಮೂರ್ತೆದಾರರ ಸಭಾಭವನದಲ್ಲಿ ಬುಧವಾರ ನಡೆಯಿತು)

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago