ಕುಂದಾಪುರ:ಶ್ರದ್ಧಾ ಭಕ್ತಿಯಿಂದ ಆಚರಣೆಗೊಳ್ಳುವ ಭಜನೆಗೆ ಶತ ಶತಮಾನದ ಇತಿಹಾಸವಿದೆ ಬಾಲ್ಯಾವಸ್ಥೆಯಲ್ಲಿ ಮಕ್ಕಳಿಗೆ ಭಜನೆ ಕಲಿಸುವುದರಿಂದ ಭಾಷೆಯ ಉಚ್ಚಾರದ ಜತೆಗೆ ಜ್ಞಾಪಕ ಶಕ್ತಿ ಕೂಡ ವೃದ್ಧಿಯಾಗುತ್ತದೆ.ಡಿಜಿಟಲ್ ಯುಗದಲ್ಲಿ ಭಜನೆಯನ್ನು ಉಳಿಸುವ ಕೆಲಸ ಆಗಬೇಕು ಎಂದು ಎಂ.ಎಂ ಸುವರ್ಣ ಅರಾಟೆ ಹೇಳಿದರು.
ತಾಲೂಕು ಭಜನಾ ಮಂಡಳಿ ಒಕ್ಕೂಟ ಕುಂದಾಪುರ ಹಾಗೂ ವಂಡ್ಸೆ ವಲಯ ಒಕ್ಕೂಟ ಸಹಯೋಗದೊಂದಿಗೆ ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ವತಿಯಿಂದ ಅರಾಟೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆದ ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕುಂದಾಪುರ ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಅಧ್ಯಕ್ಷ ನಿತಿನ್ ವಿಠಲವಾಡಿ ವಿದ್ಯಾರ್ಥಿಗಳಿಗೆ ತಾಳ ವಿತರಿಸಿ ಮಾತನಾಡಿ,ಪ್ರತಿ ದಿನವೂ ಮನೆಯಲ್ಲಿ ಭಜನೆ ಮಾಡುವುದರಿಂದ ಶಾಂತಿ ನೆಲೆಸುವುದರ ಜತೆಗೆ ಮನಸುಗಳು ಕೂಡ ಒಂದಾಗಿ ಇರುತ್ತದೆ.ದೇವರನ್ನು ಒಲಿಸಿಕೊಳ್ಳಲು ಸುಲಭವಾದ ಮಾರ್ಗವೆ ಭಜನೆ ಆಗಿದೆ.ಮನೆ ಮನೆಗಳಲ್ಲಿ ಭಜನೆ ಕ್ರಾಂತಿ ಆರಂಭಗೊಳ್ಳಬೇಕೆಂದು ಹೇಳಿದರು.
ಶ್ರೀರಾಮ ಭಜನಾ ಮಂದಿರ ಅರಾಟೆ-ಹೊಸಾಡು ಅಧ್ಯಕ್ಷ ಸುರೇಶ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಹಿರಿಯ ಭಜಕರಾದ ಕೃಷ್ಣ ಮೊಗವೀರ ಬಸಿಹಿತ್ಲು,ರಘುರಾಮ ಶೆಟ್ಟಿ ಹಾಡಿಮನೆ,ಶಂಕರ ಶೆಟ್ಟಿ,ಮಾಜಿ ಗ್ರಾ.ಪಂ ಸದಸ್ಯರಾದ ರಮೆಶ ಆಚಾರ್ಯ ಅರಾಟೆ,ಸುಮತಿ ಮೊಗವೀರ,ಭಜನಾ ಮಂಡಳಿಗಳ ವಂಡ್ಸೆ ವಲಯಾಧ್ಯಕ್ಷ ಸಂತೋಷ ಪೂಜಾರಿ,ಶ್ರೀರಾಮ ಭಜನಾ ಮಂಡಳಿ ಉಪಾಧ್ಯಕ್ಷ ರಾಮ ಪೂಜಾರಿ ಅರಾಟೆ ಮತ್ತು ಸದಸ್ಯರು ಉಪಸ್ಥಿತರಿದ್ದರು.ಸ್ವಾತಿ ಆಚಾರ್ಯ ಅರಾಟೆ ಸ್ವಾಗತಿಸಿದರು.ಪ್ರದೀಪ ಆಚಾರ್ಯ ವರದಿ ವಾಚಿಸಿದರು.ಶಿಕ್ಷಕಿ ಸ್ಮಿತಾ ಆಚಾರ್ಯ ನಿರೂಪಿಸಿ,ವಂದಿಸಿದರು.ತಾಳ ಹಿಡಿದು ಭಜನೆ ಸಂಕೀರ್ತನೆಗೆ ಹೆಜ್ಞೆ ಹಾಕುವುದರ ಮೂಲಕ ಮಕ್ಕಳು ಕುಣಿತಾ ಭಜನೆಗೆ ಪಾದಾರ್ಪಣೆ ಮಾಡಿದರು.
(ತಾಲೂಕು ಭಜನಾ ಮಂಡಳಿ ಒಕ್ಕೂಟ ಕುಂದಾಪುರ ಹಾಗೂ ವಂಡ್ಸೆ ವಲಯ ಒಕ್ಕೂಟ ಸಹಯೋಗದೊಂದಿಗೆ ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ವತಿಯಿಂದ ಅರಾಟೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು)
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…