ಕುಂದಾಪುರ:ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಅಡಗಿರುತ್ತದೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿಕೊಟ್ಟಾಗ ಮಾತ್ರ ಅವರೊಳಗೆ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಸಾಧ್ಯವಿದೆ.ಶೈಕ್ಷಣಿಕ ಚಟುವಟಿಕೆ ಜತೆಗೆ ಸಾಂಸ್ಕ್ರತಿಕ,ಕಲೆಗೆ ಒತ್ತನ್ನು ನೀಡುವುದರಿಂದ ಒತ್ತಡ ರಹಿತವಾಗಿ ಶಿಕ್ಷಣವನ್ನು ಪಡೆಯಲು ಸಹಕಾರಿ ಆಗುತ್ತದೆ ಎಂದು ಆರ್.ಜೆ ನಯನಾ ಅಭಿಪ್ರಾಯಪಟ್ಟರು.
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜನತಾ ಚಿತ್ತಾರ-ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅದ್ಯಕ್ಷರಾದ,ಪ್ರಿನ್ಸಿಪಾಲ್ ಗಣೇಶ ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕುಂದಾಪುರ ಕನ್ನಡದ ರಾಯಭಾರಿ ಮನು ಹಂದಾಡಿ ಕುಂದಗನ್ನಡ ಶೈಲಿಯಲ್ಲಿ ಹಾಸ್ಯ ಭರಿತವಾಗಿ ಮಾತನಾಡಿದರು,ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕಿ ಚಿತ್ರಾ ಕಾರಂತ್ ಶುಭ ಹಾರೈಸಿದರು.ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳವಾರ ಉಪಸ್ಥಿತರಿದ್ದರು.ತೀರ್ಪುಗಾರರಾಗಿ ಕೆ.ಪಿ.ಎಸ್ ಕೋಟೇಶ್ವರ ಸಹ ಶಿಕ್ಷಕ ರಮಾನಂದ ನಾಯ್ಕ್,ಆಲೂರು ಶಾಲೆ ಶಿಕ್ಷಕಿ ನಾಗರತ್ನಾ ಜಿ,ಬಸ್ರೂರು ಪ್ರೌಢಶಾಲೆ ಸಹ ಶಿಕ್ಷಕಿ ಅರ್ಪಣಾ ಹೆಗ್ಡೆ,ಹೆಮ್ಮಾಡಿ ಜನತಾ ಶಾಲೆಯ ಶಿಕ್ಷಕ ಜಗದೀಶ್ ಭಾಗವಹಿಸಿದ್ದರು.ವೈಯಕ್ತಿಕ ಮತ್ತು ಸಾಮೂಹಿಕ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಪ್ರಿನ್ಸಿಪಾಲ್ ಗಣೇಶ ಮೊಗವೀರ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿದರು.ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…