ಬೈಂದೂರು:ಕೈರಂಪಣಿ ಮೀನುಗಾರಿಕೆಗೆ ಮಾಡಲು ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ಭಾನುವಾರ ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ.ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಂದು ಸಮುದ್ರಕ್ಕೆ ತೆರಳಿದ್ದರು.ಸಮುದ್ರ ಪ್ರಕ್ಷುಬ್ದಗೊಂಡಿದ್ದ ಕಾರಣ ಅಪ್ಪಳಿಸಿದ ಬಾರಿ ಅಲೆಯ ಹೊಡೆತಕ್ಕೆ ಇಬ್ಬರು ಮೀನುಗಾರರು ಆಯತಪ್ಪಿ ಕಡಲಿಗೆ ಬಿದ್ದು ನಾಪತ್ತೆ ಆಗಿದ್ದಾರೆ.ನಾಪತ್ತೆಯಾದ ಇಬ್ಬರು ಮೀನುಗಾರರಿಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸಿದ್ದರು ಯಾವುದೇ ರೀತಿಯ ಪ್ರಯೋಜನವಾಗಿಲ್ಲ.
ಸಮುದ್ರದಲ್ಲಿ ನಾಪತ್ತೆ ಆದ ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ನಿರಂಜನ ಗೌಡ,ಅಗ್ನಿಶಾಮಕ ದಳ,ಕರಾವಳಿ ಕಾವಲು ಪಡೆ,ತಹಶೀಲ್ದಾರರು ಹಾಗೂ ಸ್ಥಳೀಯ ಮೀನುಗಾರರು ಹಾಜರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…