ಬೈಂದೂರು:ಶಿರೂರು ಅಳ್ವೆಗದ್ದೆ ಎಂಬಲ್ಲಿ ಭಾನುವಾರ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಆಯತಪ್ಪಿ ಕಡಲಿಗೆ ಬಿದ್ದು ನಾಪತ್ತೆ ಆಗಿದ್ದ ಗಂಗೊಳ್ಳಿ ಮುಸಾಭ್ (22) ಹಾಗೂ ನಝಾನ್ (24) ಎನ್ನುವ ಯುವಕರಿಬ್ಬರ ಶವ ಸೋಮವಾರ ಮಂಜಾನೆ ಅಳ್ವೆಗದ್ದೆ ಕಡಲ ತೀರದಲ್ಲಿ ಪತ್ತೆಯಾಗಿದೆ.ಕಡಲಿನಲ್ಲಿ ನಾಪತ್ತೆ ಆಗಿದ್ದ ಯುವಕರಿಬ್ಬರ ಪತ್ತೆಗಾಗಿ ತೀವೃವಾದ ಶೋಧವನ್ನು ಮಾಡಲಾಗಿತ್ತು.ಮುಸಾಭ್ ಕಳೆದ ವಾರವಷ್ಟೆ ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದ್ದರು.
ದುಬೈನಿಂದ ಊರಿಗೆ ಬಂದಿದ್ದ ನಝಾನ್:ಮೀನಿಗಾರಿಕೆ ತೆರಳಿದ್ದ ಸಂದರ್ಭ ಕಡಲಿಗೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದ ನಝಾನ್ ಅವರು ದುಬೈನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದರು.ಕಳೆದ ಹದಿನೈದು ದಿನದ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದರು.ಕಳೆದ ಎರಡು ತಿಂಗಳುಗಳ ಅವಧಿಯಲ್ಲಿ ಬೈಂದೂರು ತಾಲೂಕಿನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ನಾಲ್ವರು ಮೀನಿಗಾರರು ಸಮುದ್ರದಲ್ಲಿ ಪಾಲಾಗಿ ಮೃತಪಟ್ಟಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…